Monday, December 7, 2009

ಅವರಿಗೆ ’ಮತ’ದಾಸೆ, ನಮಗೆ ದೇಶದಾಸೆ!

ಛೇ, ಏನಿದು? ಇಲ್ಲ, ಅವರು ದೇಶದ ಮುಖ್ಯವಾಹಿನಿಗೆ ಸೇರುವುದೇ ಇಲ್ಲ. ಉಳಿದವರನ್ನು ಸೇರಲು ಕೂಡ ಬಿಡುವುದಿಲ್ಲ. ಅವರ ಸ್ವಾರ್ಥಕ್ಕೆ ಮತದ ಮುಖವಾಡ, ಅಲ್ಲಿ ಮತವೇ ಫುಟ್‌ಬಾಲ್ ಮತ್ತು ಅಂಪೈರ್‌ಗಳಾದ್ದೇ ಆಟ!
ಈ ರೀತಿ ಹೇಳದೆ, ಬರೆಯದೆ ವಿಧಿಯಿಲ್ಲ. ಕಾರಣ, ಮುಸ್ಲಿಂಮರು ’ವಂದೇ ಮಾತರಂ’ ಹಾಡುವುದರ ವಿರುದ್ದ ಜಾಮತೇ ಉಲೇಮಾ ಈ ಹಿಂದ್ ಹೊರಡಿಸಿರುವ ಫತ್ವಾ!
ವಾರೆವ್ಹಾ ಜಾಮತೇ ಉಲೇಮಾ ಈ ಹಿಂದ್ ವಾರೆವ್ಹಾ!
ಮುಸ್ಲಿಂಮರು, ಕೊಲೆ, ಕಳ್ಳತನ, ಅತ್ಯಾಚಾರ, ದೇಶದ್ರೋಹ ಮಾಡುವುದು ವಿಶಾಲವಾಗಿ ಹೇಳುವುದಾದರೆ ದೇಶದ ಕಾನೂನನ್ನು , ಮಾನವೀಯತೆಯನ್ನು ಗೌರವಿಸದಿರುವುದು ಇಸ್ಲಾಂ ವಿರೋಧಿಯಲ್ಲ ಆದರೆ ’ವಂದೇ ಮಾತರಂ’ ಹಾಡುವುದು ಮಾತ್ರ ಇಸ್ಲಾಂ ವಿರೋಧಿ! ಎಂಥಹ ಪರಿಕಲ್ಪನೆ ನಿಮ್ಮದು. ಅದ್ಭುತ... ಅದ್ಭುತ!
’ವಂದೇ ಮಾತರಂ’ನ್ನು ಬಂಕಿಮ ಚಂದ್ರ ಚಟರ್ಜಿ ಬರೆದದ್ದು ೧೮೭೫ರಲ್ಲಿ. ಆದರೆ ಅದು ಅವರ ಕಾದಂಬರಿ ’ಅನಂದ ಮಠ’ದ ಮೂಲಕ ಬೆಳಕು ಕಂಡದ್ದು ಮುಂದಿನ ದಶಕದ ಆದಿಯಲ್ಲಿ.
’ವಂದೇ ಮಾತರಂ’ನ್ನು ೧೮೯೬ರ ಕಾಂಗ್ರೇಸ್ ಅಧಿವೇಶನದಲ್ಲಿ ರವೀಂದ್ರನಾಥ್ ಠಾಗೋರ್ ಹಾಡಿದರು. ತದನಂತರ ೧೯೦೫ರಲ್ಲಿ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜಿಸಿದ. ಈ ಸಂದರ್ಭದಲ್ಲೇ ’ವಂದೇ ಮಾತರಂ’ ಎಂಬ ಸುಪ್ತ ಜ್ವಾಲಾಮುಖಿ ಸ್ಪೋಟಗೊಂಡು ಇಡೀ ಬೆಂಗಾಳಿಯರನ್ನು ಬೆಸೆದು ಬ್ರಿಟೀಷ್ ಆದಿಪತ್ಯದ ಮೇಲೆ ಬೆಂಕಿಯ ವರ್ಷಧಾರೆ ಸುರಿಸಿದ್ದು.
ವಂಗ ಭಂಗ ಚಳವಳಿಯ ಬೀಜಮಂತ್ರವಾಯಿತು ಈ ಹಾಡು. ೧೯೧೧ರಲ್ಲಿ ಬಂಗಾಳ ಮತ್ತೆ ಒಂದಾಯಿತು. ಅಷ್ಟರಲ್ಲೇ ’ವಂದೇ ಮಾತರಂ’ ಗಿದ್ದ ಅಗಾಧ ಶಕ್ತಿ ಮತ್ತು ಚೈತನ್ಯ ಬೆಂಗಾಳಿಯರಿಗೆ ಮನದಟ್ಟಾಗಿತ್ತು ಮತ್ತು ಬ್ರಿಟೀಷ್ ದೊರೆಗಳಿಗೆ ಆರ್ಥವಾಗಿತ್ತು!
ಇದೇ ಕಾಲದಲ್ಲಿ ಮತ್ತು ತದನಂತರ ಈ ಹಾಡು ಬಂಗಾಳದ ಎಲ್ಲೆಗಳನ್ನು ದಾಟಿ, ದೇಶದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಹೃದಯಗಳನ್ನು ಮೀಟಿ ಬ್ರೀಟಿಷರ ಹುಟ್ಟಡಗಿಸಲೆಂದೇ ಹುಟ್ಟಿಕೊಂಡ ಹೊಸ ಅಸ್ತ್ರ ಅಥವಾ ಶಕ್ತಿಯಾಗಿ ಪರಿಗಣಿಸಲ್ಪಟ್ಟಿತ್ತು.
ಅಲ್ಲಿಂದ ೧೯೨೩ರ ಕಾಕಿನಾಡ ಕಾಂಗ್ರೇಸ್ ಅಧಿವೇಶನದ ತನಕ ’ವಂದೇ ಮಾತರಂ’ ಯಾವುದೇ ವಿವಾದಗಳಿಗೆ ತುತ್ತಾಗದೇ ದೇಶ ಬಾಂಧವರನ್ನು ಒಟ್ಟುಗೂಡಿಸುತ್ತ ಸಾಗಿತು.
ಆದರೆ ಆ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮೌಲಾನಾ ಮಹಮ್ಮದ್ ಆಲಿ, ಅಧಿವೇಶನದಲ್ಲಿ ಈ ಹಾಡನ್ನು ಹಾಡುವುದಕ್ಕೆ ತಮ್ಮ ವಿರೋಧ ವ್ಯಕ್ತಪಡಿಸಿ ಈ ಹಾಡಿಗೆ ಮತ್ತು ಈ ಹಾಡಿನ ಆಶಯಕ್ಕೆ ಮೈಲಿಗೆ ಮಾಡುವ ಕೆಲಸಕ್ಕೆ ಮೂಹುರ್ತವಿಟ್ಟರು.
ಅಲ್ಲಿಂದ ನಂತರ ಹೆಚ್ಚಿನ ಮುಸ್ಲಿಂ ನಾಯಕರುಗಳಿಂದ ’ವಂದೇ ಮಾತರಂ’ನ ವಿರೋಧ ಪರ್ವ. ಇದೀಗ ಜಮಾತೆ ಉಲೇಮಾ ಸಂಘಟನೆ ಈ ಪರಂಪರೆಗೆ ಮತ್ತೊಂದು ಕೊಂಡಿ ಸೇರಿಸಿದೆ. ಇದು ಆ ಸಂಘಟನೆ ಸಂಕುಚಿತ ಚಿಂತನೆ ಮತ್ತು ಮನೋಭಾವದ ತುತ್ತಾತುದಿ ತಲುಪಿದೆ ಎಂಬುದನ್ನು ಸಾರಿದೆ. ಇಂತಹ ಮನಸ್ಥಿತಿ ಹುಟ್ಟಿಕೊಳ್ಳಲು ದೇಶದ ’ಜಾತ್ಯತೀತ’ಪಕ್ಷಗಳ ಕೊಡುಗೆ ಅಪಾರ. ಮುಸ್ಲಿಂ ಒಲವಿಗಾಗಿ ಪರಿತಪಿಸುವ ಪಕ್ಷಗಳಿಗೆ ’ವಂದೇ ಮಾತರಂ’ಅಸ್ಪಶ್ಯ,
ಇಲ್ಲೊಂದು ಗಮನಿಸಬೇಕಾದ ಸಂಗತಿಯಿದೆ. ಅದೇನೇಂದರೆ ೧೮೮೦ ರಿಂದ ೧೯೨೩ರವರೆಗೆ ಯಾವೊಬ್ಬ ಮುಸ್ಲಿಂ ಮತ ಪಂಡಿತನೂ ಈ ಹಾಡಿನ ಬಗ್ಗೆ ತಕರಾರು ಎತ್ತಿರಲಿಲ್ಲ. ಸ್ವತ: ಈಗ ಫತ್ವಾ ಹೊರಡಿಸಿರುವ ಜಾಮಾತೇ ಉಲೇಮಾ ಕೂಡ! ಅಂದರೆ ಇದರರ್ಥ, ಆಗಿದ್ದ ಇಸ್ಲಾಂ ಮತ ಪಂಡಿತರಲ್ಲಿ ಮತ ಪಾಂಡಿತ್ಯದ ಕೊರತೆಯಿತ್ತೆಂದ? ಅಥವಾ ಅವರಿಗೆ ವಂದೇ ಮಾತರಂನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಇರಲಿಲ್ಲ ಎಂದಾ? ಅಥವಾ ಅವರಿಗೆ ಇಸ್ಲಾಂ ಸರಿಯಾಗಿ ಗೊತ್ತಿರಲಿಲ್ಲ ಎಂದಾ? ಅಥವಾ ೧೯೨೦ರ ನಂತರದ ಹಲವು ಮುಸ್ಲಿಂ ನಾಯಕರು ಅಧಿಕಾರ ದಾಹಕ್ಕಾಗಿ ಈ ಹಾಡನ್ನು ಗೊತ್ತಿದ್ದು ಗೊತ್ತಿದ್ದು ತಪ್ಪಾಗಿ ಅರ್ಥೈಸಿಕೊಂಡರಾ?
ಮುಸ್ಲಿಂ ನಾಯಕರ ’ವಂದೇ ಮಾತರಂ’ದ್ವೇಷಕ್ಕೆ ಮತ್ತೊಂದು ಕಾರಣವನ್ನು ಊಹಿಸಬಹುದು. ಅದೇನೆಂದರೆ ಈ ಹಾಡು ಇರುವ ’ಅನಂದ ಮಠ’ಕಾದಂಬರಿಯ ಕಥಾವಸ್ತು. ಇಲ್ಲಿ ಬಂಗಾಳದ ಸಂತಾನ ಎಂಬ ಗುಡ್ಡಗಾಡು ಜನರು, ಆಕ್ರಮಣಕಾರಿ ಮುಸ್ಲಿಂರ ವಿರುದ್ಧ ಹೋರಾಡುತ್ತಾರೆ. ಈ ಗುಡ್ಡಗಾಡು ಜನರಿಗೆ ಸ್ಪೂರ್ತಿಯಾಗಿ ಈ ಹಾಡು ಕಾದಂಬರಿಯಲ್ಲಿ ಬಳಕೆಯಾಗುತ್ತದೆ. ಇದು ಮುಸ್ಲಿಂ ನಾಯಕರುಗಳಿಗೆ ನೋವು ತಂದಿರಬಹುದು.
ಸರಿ, ಒಪ್ಪೋಣ. ದೇಶದ ಜನರು ಆ ಕಾದಂಬರಿಯನ್ನು ಬಾಯಿ ಪಾಠ ಹೊಡೆಯಲಿ, ಆ ಪುಸ್ತಕವನ್ನ ’ರಾಷ್ಟ್ರ ಪುಸ್ತಕ’ಎಂದು ಘೋಷಿಸಲಿ ಎಂದು ಇಲ್ಲಿ ಯಾರೂ ಹೇಳುತ್ತಿಲ್ಲ. ಇನ್ನು ಈ ಕಾದಂಬರಿಯ ಬಗ್ಗೆ ದೇಶದ ಶೇ. ೯೯ ಮಂದಿಗೆ ಅರಿವೆ ಇರಲಿಕ್ಕಿಲ್ಲ. ಇದ್ದರೂ ಅದರ ಕಥಾಹಂದರದ ಬಗ್ಗೆ ಗೊತ್ತೇ ಇರಲಿಕ್ಕಿಲ್ಲ. ಅವರಿಗೆ ಈ ಹಾಡು ಹುಟ್ಟಿಸುವ ದೇಶಭಕ್ತಿ ಮುಖ್ಯ ಉಳಿದ ವಿಷಯಗಳು ನಗಣ್ಯ.
ಅದರಲ್ಲೂ ಆ ’ಹಿರಿದಾದ’ಹಾಡಿನಲ್ಲಿರುವ ಹಿಂದೂ ದೇವತೆಗಳ ವರ್ಣನೆಯನ್ನು ತೆಗೆದು ಟ್ರಿಮ್ ಮಾಡಿ ಮುಸ್ಲಿಂಮರ ಧಾರ್ಮಿಕ ನಂಬಿಕೆಗೆ ಯಾವ ಚ್ಯುತಿಯೂ ಆಗದ ರೀತಿಯಲ್ಲಿ ಈ ಹಾಡನ್ನು ಈಗ ಬಳಸಿಕೊಳ್ಳಲಾಗುತ್ತಿದೆ. ಆದರೂ ಉಲೇಮಾದ ನಖಾರ ಅದರ ಉದ್ದಟತನದ ಪ್ರತೀಕ.
ಈಗ ದೇಶದ ರಾಷ್ಟ್ರಗೀತೆ ’ಜನಗಣಮನ’ವನ್ನು ತೆಗೆದುಕೊಳ್ಳಿ. ಈ ಹಾಡನ್ನು ಎಲ್ಲರೂ ಗೌರವಿಸುತ್ತಾರೆ ನಿಜ. ಅದರೆ ಈ ಹಾಡು ’ಉತ್ಸವ ಮೂರ್ತಿ’ ರೀತಿ ಅನಿಸಿಬಿಟ್ಟಿದೆ. ಅದು ಇಂದಿಗೂ ದೇಶವಾಸಿಗಳ ಹೃದಯದ ಹಾಡಗಿಲ್ಲ, ಜನರನ್ನು ಬೆಸೆದಿಲ್ಲ, ಜನರಲ್ಲಿ ಯಾವುದೋ ಒಂದು ಉದ್ದೇಶಕ್ಕಾಗಿ ಶ್ರಮಿಸುವಂತೆ, ಹೋರಾಡುವಂತೆ ಮಾಡಿಲ್ಲ, ಜನರಿಗೆ ಸ್ಪೂರ್ತಿಯಾಗಿಲ್ಲ ಅದಕ್ಕಿಂತ ಹೆಚ್ಚಾಗಿ ಜನರ ಪ್ರಜ್ಞೆಗೆ ಇಳಿದೇ ಇಲ್ಲ.
’ವಂದೇ ಮಾತರಂ’ ಆ ಕಾಲದಲ್ಲಿ ಕೇವಲ ಹತ್ತು ವರ್ಷದಲ್ಲಿ ಸಾಧಿಸಿದನ್ನು ’ಜನಗಣಮನ’ಕ್ಕೇ ಈ ಕಾಲದಲ್ಲಿ ಕಳೆದ ೬೦ ವರ್ಷಗಳಿಂದ ಸಾಧಿಸಲು ಸಾಧ್ಯವಾಗಿಲ್ಲ.
ಇನ್ನು ಜಮಾತೇ ಉಲೇಮಾದ ವಿಷಯಕ್ಕೆ ಬರೋಣ, ಇದು ಅಸ್ತಿತ್ವಕ್ಕೆ ಬಂದದ್ದು ೧೯೧೯ರಲ್ಲಿ. ಭಾರತದಲ್ಲಿನ ಮುಸ್ಲಿಂಮರ ಶ್ರೇಯೋಭಿವೃಧಿ ಇದರ ಉದ್ದೇಶ. ಇದರ ಮುಖ್ಯ ಕಚೇರಿ ೧, ಬಹದ್ದೂರ್ ಶಾ ಜಾಫರ್ ರಸ್ತೆ, ನವದೆಹಲಿಯಲ್ಲಿದೆ.
ಇದು ಪಾಕಿಸ್ತಾನದ ಸೃಷ್ಟಿಯನ್ನು ವಿರೋಧಿಸಿತ್ತು. ಇದಕ್ಕಿಂತ ಅಶ್ಚರ್ಯದ ವಿಷಯವೆಂದರೆ ಕಳೆದವರ್ಷ ಭಯೋತ್ಪಾದನೆ ವಿರುದ್ದ ಪತ್ವಾ ಹೋರಡಿಸಿತ್ತು. ಈಗ ’ವಂದೇ ಮಾತರಂ’ವಿರುದ್ದ ಫತ್ವಾ! ಅಂದರೆ ಮುಗ್ದರನ್ನು ಕೊಲ್ಲವವರು ಮತ್ತು ’ವಂದೇ ಮಾತರಂ’ಹಾಡುವ ಮುಸ್ಲಿಂಮರು ಒಂದೇ ಎಂದ ಹಾಗಯ್ತು.
ಒಬ್ಬ ಮುಗ್ದನನ್ನು ಕೊಲ್ಲುವುದು, ಇಡೀ ಮಾನವ ಜನಾಂಗದ ಹತ್ಯೆ ಮಾಡಿದ ಪಾಪಕ್ಕೆ ಸಮ ಎಂದು ಕುರಾನ್‌ನಲ್ಲಿ ಇದೆಯೆಂದು ಬಲ್ಲವರು ಹೇಳುತ್ತಾರೆ. ಆದರೆ ಅದೆಲ್ಲದಕ್ಕಿಂತ ಹೆಚ್ಚು ಪಾಪದ ಕೆಲಸ ’ವಂದೇ ಮಾತರಂ’ಹಾಡುವುದು!
’ವಂದೇ ಮಾತರಂ’ಹಾಡಿದೊಡನೆ ಕುಸಿದು ಬೀಳುವಷ್ಟು ಜಾಳಾಗಿದೆಯಾ ಇಸ್ಲಾಂ? ಇದು ಪ್ರಶ್ನೆಯಲ್ಲ, ಸಂಶಯ.
ಸೂಡಾನ್‌ನ ಶೇಕ್ ಸಾದಿಕ್ ಅಬ್ದದಲ್ಲಾ ಬಿನ್ ಮಜೀದ್ ಎಂಬ ಮುಸ್ಲಿಂ ನಾಯಕ ಮಕ್ಕಳಿಗೆ ಲಸಿಕೆ ಕೊಡಿಸುವುದರ ವಿರುದ್ದ ಫತ್ವಾ ಹೊರಡಿಸಿದ್ದ. ಇರಾನ್‌ನ ಅಯೆತೊಲ್ಲ ಆಲಿ ಕಮೇನಿ, ಅಣ್ವಸ್ತ್ರ ಬಳಕೆ ಮತ್ತು ಶೇಖರಣೆ ವಿರುದ್ದ ಫತ್ವಾ ಹೊರಡಿಸಿದ್ದ. ಇನ್ನು, ಒಸಮಾ ಬಿನ್ ಲಾದನ್ ೧೯೯೬ ಮತ್ತು ೧೯೯೮ರಲ್ಲಿ ಹೊರಡಿಸಿದ್ದ ಫತ್ವಾದಲ್ಲಿ ಅಮೆರಿಕ, ಇಸ್ರೇಲ್‌ಗೆ ತನ್ನ ಬೆಂಬಲ ವಾಪಸ್ ಪಡೆದುಕೊಳ್ಳುವವರೆಗೆ ಮತ್ತು ಮುಸ್ಲಿಂ ರಾಷ್ಟ್ರಗಳಲ್ಲಿರುವ ತನ್ನ ಸೈನ್ಯವನ್ನು ವಾಪಸ್ ಪಡೆದುಕೊಳ್ಳುವವರೆಗೆ ಅದರ ನಾಗರಿಕರನ್ನು ಮತ್ತು ಸೈನಿಕರನ್ನು ಕೊಲ್ಲುವಂತೆ ಹೇಳಿದ್ದ. ಇವು ಕೆಲವೇ ಕೆಲವು ಸಾಮಾಜಿಕ ಪರಿಣಾಮ ಬೀರುವ ಮತ್ತು ಬೀರಿದ ಫತ್ವಾಗಳು.
ಇದರ ಜೊತೆ ಜೊತೆಗೆ ಸಿಗರೇಟ್ ಸೇವನೆಯ ವಿರುದ್ದ ಫತ್ವಾವಿದೆ. ಭಯೋತ್ಪಾದನೆಯ ವಿರುದ್ದವೂ ಫತ್ವಾವಿದೆ. ಇಂತಹ ಫತ್ವಾ ಇದ್ದರೂ ಮುಸ್ಲಿಂಮರು ಎಗ್ಗಿಲ್ಲದೆ ಸಿಗರೇಟ್ ಸೇದುತ್ತಾರೆ. ಭಯೋತ್ಪಾದನ ಚಟುವಟಿಕೆ ಅಥವಾ ಕೊಲ್ಲುವ, ಹಲ್ಲೆ ಮಾಡುವ ಚಟುವಟಿಕೆಗಳಲ್ಲಿ ’ಉತ್ಸಾಹ’ದಿಂದ ಪಾಲ್ಗೊಳ್ಳುತ್ತಾರೆ. ಇದರರ್ಥ, ಅವರು ಫತ್ವಾಕ್ಕೆ ಸೊಪ್ಪು ಹಾಕುತ್ತಿಲ್ಲ ಬದಲು ಟೋಪಿ ಹಾಕುತ್ತಿದ್ದರೆ ಎಂದಾಯಿತು.
ಅದ್ದರಿಂದ ’ವಂದೇ ಮಾತರಂ’ಬಗೆಗೂ ಅವರ ಪ್ರತಿಕ್ರಿಯೆ ಅದೇ ರೀತಿ ಇರಬಹುದು ಎಂದು ಊಹಿಸಬಹುದು. ಹಾಗೇ ಆಗಿದ್ದೇ ಆದಲ್ಲಿ ಖಂಡಿತ ಇದೊಂದು ಅಭೂತ ಪೂರ್ವ ಬೆಳವಣಿಗೆ. ಆದರೆ ಇದು ಹಾಗೇ ಆಗುವುದಿಲ್ಲ ಎಂದು ನಂಬಲು ಬಲವಾದ ಕಾರಣವಿದೆ. ಯಾಕೆಂದರೆ ’ವಂದೇ ಮಾತರಂ’ನ್ನು ವಿರೋಧಿಸಲು ಮತ ಪಂಡಿತರು ನೀಡಿರುವ ಕಾರಣ ಅದು ಹಿಂದೂ ದೇವತೆಗಳನ್ನು ಹೊಗಳುತ್ತದೆ ಎಂಬುದು. ಇಸ್ಲಾಂ ’ಅಲ್ಲಾಹು’ನ ಹೊರತಾಗಿ ಯಾರನ್ನೂ ಮತ್ತೂ ಯಾವುದನ್ನು ದೇವರೆಂದು ಪರಿಗಣಿಸುವುದಿಲ್ಲ. ಈಗ ನೀ ’ವಂದೇ ಮಾತರಂ’ಹಾಡಿದರೆ ಅದು ನೀನು ’ಅಲ್ಲಾಹು’ವಿಗೆ ಮಾಡುವ ಅಪಚಾರ ಎಂದು ಬಿಂಬಿಸಿದರೆ ಸಾಕು. ಮುಸ್ಲಿಂಮರು ತಪ್ಪಿಯೂ ಅ ಪದವನ್ನು ಉಸುರುವುದಿಲ್ಲ.
ಫತ್ವಾ ಹೊರಡಿಸುವವರು ’ಪರಿಶುದ್ದ’ರು ಎಂದು ನೀವು ತಿಳಿದುಕೊಳ್ಳಬೇಡಿ. ೨೦೦೮ರಲ್ಲಿ ಟಿವಿ ಚಾನೆಲ್‌ವೊಂದು ನಡೆಸಿದ ’ಕುಟುಕು ಕಾರ್ಯಾಚರಣೆ’ಯಲ್ಲಿ ಹಣ ಪಡೆದು ಫತ್ವಾ ಹೋರಾಡಿಸುತ್ತಿದ್ದ ಅನೇಕ ಮುಸ್ಲಿಂ ನಾಯಕರು ’ಬೆಳಕಿಗೆ’ ಬಂದಿದ್ದರು.
ದೇಶದ ೯೦ ಕೋಟಿ ಜನರಿಂದ ಈ ೧೬ ಕೋಟಿ ಮುಸ್ಲಿಂಮರನ್ನು ದೂರವಿಡುವ ಕೆಲಸವನ್ನು ಕಾಲಕಾಕ್ಕೆ ಈ ಮುಸ್ಲಿಂ ನಾಯಕರುಗಳು ಯಾಕೆ ಮಾಡುತ್ತಿದ್ದಾರೆ? ಈ ಹಿಂದೆಯೂ ಇಂತಹ ನಾಯಕರುಗಳ ಮಾತು ಕೇಳಿದ ಮುಸ್ಲಿಂಮರು ಇಂದು ಪಾಕಿಸ್ತಾನ ಮತ್ತು ಬಾಂಗ್ಲದೇಶಗಳಲ್ಲಿ ಪಡಬಾರದ ಯಾತನೆ ಪಡುತ್ತಿದ್ದಾರೆ. ಅದ್ದರಿಂದ ಇಂತಹ ದೊಣ್ಣೆ ನಾಯಕರುಗಳ ವಿಷ ಮಾತುಗಳಿಗೆ ದೇಶದ ಮುಸ್ಲಿಂಮರು ಮಣೆ ಹಾಕಬಾರದು.
ಇಲ್ಲಿನ ಬಹುಸಂಖ್ಯಾತರ ಜೊತೆ ಕೂಡಿ ಬಾಳುವ ದಿಸೆಯಲ್ಲಿ, ಮತ್ತವರ ನಂಬಿಕೆಯನ್ನು ಗೌರವಿಸಿ ಸಾಮರಸ್ಯದ ಬದುಕು ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ದೇಶ ಖಂಡಿತವಾಗಿಯೂ ಅವರನ್ನು ಹೃದಯದಲ್ಲಿಟ್ಟು ಗೌರವಿಸುತ್ತದೆ. ಉದಾಹರಣೆಗೆ ಪ್ರಸಕ್ತ ಭಾರತದ ಸರ್ವಶ್ರೇಷ್ಟ ನಾಯಕ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಚಲನಚಿತ್ರ ತಾರೆಯರು, ಕ್ರೀಡಾ ಕಲಿಗಳನ್ನು, ನಾನ ಕ್ಷೇತ್ರಗಳಲ್ಲಿನ ಸಾಧಕರನ್ನು ನಾವು ಜಾತಿ ಮತದ ಹಂಗಿಲ್ಲದೆ ಗೌರವಿಸಿದ್ದೇವೆ, ಪ್ರೀತಿಸಿದ್ದೇವೆ ಮುಂದೆಯೂ ನಾವು ಈ ಕಾರ್ಯ ಮಾಡಲಿದ್ದೇವೆ.
ಇಲ್ಲ, ನಿಮಗೆ ಇಂತಹ ಫತ್ವಾಗಳೇ ಮುಖ್ಯವಾಗುವುದಾದರೇ ಅಂದು ಫತ್ವಾ ಹೊರಡಿಸುವಾಗ ವೇದಿಕೆಯಲ್ಲಿ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಇದ್ದರು ಮತ್ತು ಅವರು ಸುಮ್ಮನಿದ್ದರು ಮತ್ತು ಈಗಲೂ ಸುಮ್ಮನಿದ್ದಾರೆ ಬಹುಶಃ ಮುಂದೆಂಯೂ ಸುಮ್ಮನಿರುತ್ತಾರೆ. ಅವರಿಗೆ ಮತ್ತು ಫತ್ವಾ ಹೊರಡಿಸಿದವರಿಗೆ ’ಮತ’ದಾಸೆ. ಆದರೆ ದೇಶದ ೯೦ ಕೋಟಿ ಜನರು ಹಾಗಿಲ್ಲ, ಹಾಗಿರುವುದು ಇಲ್ಲ! ಯಾಕೆಂದರೆ ಅವರಿಗಿರುವುದು ದೇಶದ ಸಮಗ್ರತೆಯನ್ನು ಉಳಿಸಿಕೊಳ್ಳುತ್ತೇವೆ ಎಂಬ ಮಹಾದಾಸೆ!