ನೆನಪಿನ ರಾಶಿಯನ್ನು ಕೆದಕಿದಾಗ ದೊಡ್ಡ ಪೆಟ್ಟಿಗೆಯಲ್ಲಿ ಕಟ್ಟಿಟ್ಟ ಪೊಗದಸ್ತಾದ ನೆನಪೊಂದು ಸಿಕ್ಕಿತ್ತು. ಬಿಚ್ಚಿ ನೋಡುತ್ತೇನೆ... ಇಂದಿಗೂ ಘಮಘಮಿಸುವ ಬಾಲ್ಯದ ನೆನಪುಗಳವು! ಅದರಲ್ಲೂ ಚಿಕ್ಕ ರಜೆ ಸಿಗಲೆಂದು ಕಾತರಿಸಿ ಸಿಕ್ಕಾಗ ಕುಣಿದು ಕುಪ್ಪಳಿಸಿ ಸಿಕ್ಕ ನಂತರ ಪ್ರತಿಕ್ಷಣವನ್ನು ಅಸ್ವಾದಿಸಿದ ಸುಮಧುರ ನೆನಪದು.
ಆಡೋದು, ಓಡೋದು, ನೆಂಟರ ಮನೆಗೆ ಹೋಗೋದು, ಚಿಕ್ಕ ತೊರೆಯಲ್ಲಿ ಮೀನು ಹಿಡಿಯೋದು ಇವೆಲ್ಲ ಪ್ರತಿ ರಜೆಯ ಸಹಜ ದಿನಚರಿ. ಅಂದು ಚಿಕ್ಕ ಚಿಕ್ಕ ಸಂತೋಷಗಳನ್ನು ಬೃಹತ್ತಾಗಿ ಕಂಡು ಅನುಭವಿಸುವ ಮುಗ್ದ ಮನಸ್ಸಿತ್ತು. ಆ ಮನಸ್ಸಿಗೋ ತನಗನಿಸಿದ ಕೀಟಲೆ ಮಾಡುವ ಸ್ವಾತಂತ್ರ್ಯವಿತ್ತು. ಆ ಸ್ವಾತಂತ್ರ್ಯ ಸ್ವೇಚ್ಚೆಯಾದಗ ನಿಯಂತ್ರಿಸಲು ಅಪ್ಪನ ಗದರಿಕೆ, ಬೆತ್ತ ಅಥವಾ ಅಮ್ಮನ ಬುದ್ದಿಮಾತಿನ ಕಡಿವಾಣವಿತ್ತು. ನೋವಾದಾಗ ಆಳುವ ಅವಕಾಶವಿತ್ತು. ಖುಷಿಯಾದಾಗ ನಮ್ಮ ಅಭಿವ್ಯಕ್ತಿಯನ್ನು ಕಂಡೇ ಸಂತೋಷಪಡುವ ಬಂಧುಬಳಗವಿತ್ತು. ಆಡಿದ, ಆಡುವ ಪ್ರತಿ ಮಾತಲ್ಲೂ ಮುಗ್ದತೆಯನ್ನು ಕಂಡು ಅದಕ್ಯಾವುದೇ ಅರ್ಥ ಆರೋಪಿಸದೆ ಅದರ ಸ್ನಿಗ್ದ ಸೌಂದರ್ಯವನ್ನು ಅನುಭವಿಸುವ ನೆಂಟರಿಷ್ಟರಿದ್ದರು. ನಮ್ಮ ಬಗ್ಗೆ ನಮಗಿಂತ ಹೆಚ್ಚು ಕಾಳಜಿ ವಹಿಸುವ ಮನೆಯವರಿದ್ದರು.
ಅವರೇ ಈಗಲೂ ಇದ್ದಾರೆ. ರಜೆಯೀಗಲೂ ಬರುತ್ತದೆ. ಆದರೆ ಅವರಿಗೂ ನಮಗೂ ಪ್ರಬುದ್ಧತೆ ಎಂಬ ಬೇಡಿ ಹಾಕಲಾಗಿದೆ. ಇವತ್ತೇನಿದ್ದರೂ ಆಟವೆಂದರೆ, ಕ್ರಿಕೆಟ್, ಕಬಡ್ಡಿ, ವಾಲಿಬಾಲ್ ಗಳೆಂಬ ಆಟಗಳನ್ನೇ ಆಡಬೇಕಾಗಿದೆ. ಮನಸ್ಸಿಗನಿಸಿದ ಕೀಟಲೆ ಮಾಡ ಹತ್ತಿದರೆ ಸಾರ್ವಜನಿಕರಿಂದ ಧರ್ಮದೇಟು ತಿನ್ನಬೇಕು!. ಅದರೊಂದಿಗೆ ಅನಾಮತ್ತಾಗಿ ಹುಚ್ಚನ ಸ್ಥಾನ ಸಿಗುತ್ತದೆ. ಬೇಸರವೆನಿಸಿ ಅತ್ತರೆ ಧಮಿಲ್ಲದವನೆಂಬ ಪಟ್ಟ ಕಾದಿರುತ್ತದೆ. ಖುಷಿಯಾದರೆ ನಗಬೇಕು ಅಥವಾ ಪಾರ್ಟಿ ಕೊಡಬೇಕು. ಅದು ಬಿಟ್ಟು ಬೇರೇನೋ ಮಾಡ ಹತ್ತಿದರೆ ಅದಕ್ಕೆ ನೂರಾರು ಅರ್ಥ. ಆಡುವ ಪ್ರತಿ ಮಾತು ಕೂಡ ಜಾಗರೂಕವಾಗಿರಬೇಕು. ಇಲ್ಲದೇ ಹೋದಲ್ಲಿ ಆಡಿದವನ ಯೋಚನೆಗೆ ನಿಲುಕದ ಭಾವಗಳು ಮಾತಿನ ಹಿಂದೆ ಇದೆ ಎಂಬ ಗುಮಾನಿ. ನಮ್ಮ ಬಗ್ಗೆ ಯಾರಾದರೂ ಹೆಚ್ಚಿನ ಕಾಳಜಿ ವಹಿಸಿದರೆ 'ಏನೋ ಇದೆ' ಎಂಬ ಶಂಕೆ ಅದರಲ್ಲೂ ಅವರು ನಮ್ಮ ವಿರುಧ್ಧ ಲಿಂಗಿಯಾಗಿದ್ದಾರೆ ಕತೆ ಮುಗಿಯಿತು. ನೋಡು ನೋಡುತ್ತಲೇ ಅದೇಷ್ಟು ಬದಲಾವಣೆ!
ಆ ಬಾಲ್ಯ, ಈ ಯವ್ವನ ಎರಡು ಬೇರೆ ಬೇರೆ ತುಂಡುಗಳು ಎಂದು ಅನಿಸುತ್ತಿಲ್ಲವೇ?
Friday, September 18, 2009
Friday, September 11, 2009
ಗುರು
ಅಂದು ಗುರು ಸಾಕ್ಷತ್ ಪರಬ್ರಹ್ಮ ಸ್ವರೂಪ. ಇದ್ದದ್ದು, ಇ(ಬ)ರುತ್ತಿದ್ದದ್ದು ಪೂಜ್ಯ ಭಾವನೆಯೊಂದೇ. ಅವರು ಏನು ಹೇಳಿದರು, ಮಾಡಿದರು ಅದರಲ್ಲಿ ಜಿನುಗುತ್ತಿದ್ದದ್ದು ಸದಾಶಯ. ಆ ಗುರುವಿನ ಶಿಷ್ಯನಾಗುವುದು ಅಷ್ಟು ಸುಲಭವಾಗಿರಲಿಲ್ಲ. ಸಾಕಷ್ಟು ಸತ್ವ ಪರೀಕ್ಷೆಗಳಿಗೆ ಈಡಾಗಬೇಕಿತ್ತು, ಅದರಲ್ಲಿ ಯಶ ಪಡೆಯಬೇಕಿತ್ತು. ಅಷ್ಟರಲ್ಲೇ ವಿದ್ಯಾಕಾಂಕ್ಷಿ ಹಣ್ಣುಗಾಯಿ ನೀರುಗಾಯಿಯಾಗುತ್ತಿದ್ದ. ಮತ್ತೂ ಗುರುಮುಖೇನ ಕಲಿಯುವ ತುಡಿತ ಉಳಿದಿದ್ದೇ ಆದರೆ ಅನಂತರ 'ಮಾಗುವ' ಪ್ರಕ್ರಿಯೆ ಶುರು.
ಕಲಿಕೆ ಅಂದರೆ ಅದೊಂದು ತಪಸ್ಸು. ಕಲಿಯುವಿಕೆಯ ಹಂತಗಳಲ್ಲಿ ಗುರು ಶಿಷ್ಯರು ಪರಸ್ಪರ ವಶ ಮತ್ತು ವಿವಶ. ಗುರು ಕೊಡುವ ಶಿಕ್ಷೆ ಅಂದರೆ ಆದು ಆಶಿರ್ವಾದ ಸ್ವರೂಪ. ಅದರಲ್ಲೂ ಕಲಿಯುವಿಕೆಯ ಆನಂದ. ಗುರುವಿನ ಶಿಕ್ಷೆ ಆತನ ಮನಸ್ಸಿನ ಅಸಹನೆ, ದ್ವೇಷ, ಅಹಂ ಅಥವಾ ಹೆಂಡತಿ ಜೊತೆ ಜಗಳವಾಡಿದ ಕಾರಣದಿಂದ ಬರುತ್ತಿದ್ದಲ್ಲ. ಅದು ಸಹಜ, ಅನಿವಾರ್ಯ ಮತ್ತು ಶಿಷ್ಯನಲ್ಲಿ ಕಲಿಯುವಿಕೆಯ ಹಪಾಹಪಿ ಹುಟ್ಟಿಸುವಂತದ್ದು ಮತ್ತು ಆ ಕಲಿಕೆಗೆ ಸಮಗ್ರತೆಗೆ ತುಂಬುತ್ತಿತ್ತು. ಇದು ಇಂದಿನ ಶಿಕ್ಷಣ ವ್ಯವಸ್ಥೆಯಲ್ಲ, ಬದಲು ಗುರು ಪರಂಪರೆ. ಗುರುಕುಲವೇ ಅಂದಿನ ಜ್ಞಾನದೇಗುಲ.
ಅನಂತರ
ಈ ಗುರು ಪರಂಪರೆಯನ್ನು ಆವರಿಸಿಕೊಂಡದ್ದು ಶಿಕ್ಷಣ ವ್ಯವಸ್ಥೆ. ಇದು ಮೊಳಕೆಯೊಡೆದದ್ದು 1835ರಲ್ಲಿ. ಈ ವ್ಯವಸ್ಥೆಯ ಓಘ 1990ರ ತನಕ ಹೆಚ್ಚು ಕಡಿಮೆ ಒಂದೇ ರೀತಿಯಲ್ಲಿತ್ತು. ಇದೇ ಸಂದರ್ಭ ಭಾರತದ ಸ್ವಾತಂತ್ರ್ಯ ಹೋರಾಟ, ಅದರಲ್ಲಿನ ಗೆಲುವು ಮತ್ತು ಎಲ್ಲಾ ರೀತಿಯ ಐರೋಪ್ಯ ಮತ್ತು ಪೌರತ್ಯ ಪ್ರಣೀತ ಚಿಂತನೆಗಳು ಮತ್ತು ಸಾಧನಗಳು ನಮ್ಮ ನೆಲವನ್ನು ಪ್ರವೇಶಿಸಿದ್ದು. ಮತ್ತು ನಾವು ಕೂಡ ಆ ಸಂಗತಿಗಳಲ್ಲಿ ಸಾಧನೆ ಮಾಡಿದ್ದು. ಇದಕ್ಕೆಲ್ಲ ಕಲಶವಿಟ್ಟಂತೆ ಪ್ರಜಾಪ್ರಭುತ್ವವನ್ನು ನಮ್ಮ ಆಡಳಿತ ವಿಧಾನವಾಗಿ ಸ್ವೀಕರಿಸಿದ್ದು. ಈ ವ್ಯವಸ್ಥೆಯ ಸಮರ್ಪಕತೆಯ ಬಗ್ಗೆ ಪ್ರಶ್ನೆಗಳಿದ್ದರೂ ವಿದ್ಯೆಯನ್ನು ಸಾರ್ವತ್ರಿಕ ಮಾಡಿತು ಎಂಬುದನ್ನು ಅಲ್ಲಗಳೆಯುವಂತಿಲ್ಲ. ಉಳಿದಂತೆ ಇದರ ಒಳಿತು ಕೆಡುಕುಗಳು ಮತ್ತು ಈ ವ್ಯವಸ್ಥೆ ಹುಟ್ಟಿಕೊಳ್ಳಲು ಕಾರಣವಾದ ಸಂಗತಿಗಳು ಒತ್ತಟ್ಟಿಗಿರಲಿ. ಇಲ್ಲಿ 'ಗುರು' 'ಶಿಕ್ಷಕ'ನಾದ. ಆದರೆ ಆಶಯ ಬದಲಾಗಲಿಲ್ಲ, ಬರಡಾಗಲಿಲ್ಲ. ಕಾರಣವಿಷ್ಟೇ ಈ ವ್ಯವಸ್ಥೆ ಹೀರಿಕೊಂಡದ್ದು ಆ ಪರಂಪರೆಯಿಂದ!
ಆ ಶಿಕ್ಷಕ, ಮೇಷ್ಟ್ರು, ಟೀಚರ್, ಲೆಕ್ಚರರ್ ಅಂದರೆ ತುಂಬು ಗೌರವ ಅ ಗುರುವಿಗೆ ಸಂದಂತೆ ಇವರಿಗೂ ಸಲ್ಲುತ್ತಿತ್ತು. ಇಲ್ಲಿ ಅವರಿಗೆ ದೈವಂಶ ಸಂಭೂತರೆಂಬ ಪಟ್ಟವಿರದಿದ್ದರು ಬೀದಿಯಲ್ಲಿ ಅವರ ತಲೆ ಕಂಡರೆ ಸಾಕು ಹಿರಿಕಿರಿಯರೆನ್ನದೇ ಎಲ್ಲರಿಂದಲೂ ನಮಸ್ತೆಗಳ ಸುರಿಮಳೆ. ಅದೇನೂ ಒತ್ತಾಯಪೂರ್ವಕವಾಗಿ ಬರುತ್ತಿದ್ದದ್ದಲ್ಲ. ಅದು ಸಹಜ ಮತ್ತು ಭಕ್ತಿ ಪೂರ್ವಕ. ನಮ್ಮ ಹಳ್ಳಿಗಳಲ್ಲಿ ಈ ಟೀಚರ್ ಕೈಗೇ ಮಕ್ಕಳನ್ನು ಒಪ್ಪಿಸಿ ಅಂದರೆ ಶಾಲೆಗೆ ಕಳುಹಿಸಿದರೆ ಮನೆಮಂದಿಯಲ್ಲಿ ಅದೇನೋ ಒಂದು ಸಂತೃಪ್ತ ಭಾವ ಮತ್ತೊಂದು ಸುಂದರ ಕನಸು.
ಈ ವ್ಯವಸ್ಥೆಯಲ್ಲಿ ಪ್ರೀತಿಯಿಂದ ತೀಡುವ ವಿಠಲ ಮೇಷ್ಟ್ರು ಇದ್ದರು, ಕೋಲಿನಿಂದ ಬಡಿಯುವ ರುದ್ರಪ್ಪ ಮೇಷ್ಟ್ರು ಇದ್ದರು. ಅವೆಲ್ಲವನ್ನು, ಅವರೆಲ್ಲರನ್ನೂ ಮಕ್ಕಳು ಜೀರ್ಣಿಸಿಕೊಳ್ಳುತ್ತಿದ್ದರು ಅದಕ್ಕಿಂತ ಹೆಚ್ಚಾಗಿ ಹೆತ್ತವರು ಕೂಡ! ಆ ಪೆಟ್ಟಿನ ಭಯದಿಂದ ಕಲಿತು ಮಹನೀಯರಾದವರು ಬಹಳಷ್ಟು ಮಂದಿ. ನಮ್ಮ ನಮ್ಮ ಅಪ್ಪ ಅಮ್ಮಂದಿರೂ ಕೂಡ!
ಈಗ
ಹೊಡೆತಕ್ಕೆ ಬಿದ್ದಿದೆ ಫುಲ್ ಸ್ಟಾಪ್. ಸ್ವತಃ ಸರಕಾರವೇ ಈ ನಿರ್ದೆಶನವಿತ್ತಿದೆ. ಶಿಕ್ಷಣ ವ್ಯವಸ್ಥೆ, ಶಿಕ್ಷಣ ಕ್ಷೇತ್ರವಾಗಿದೆ. ಶಿಕ್ಷಕನದ್ದು ಒಂದು ವೃತ್ತಿ ಅಷ್ಟೆ. ಅದಕ್ಕಿಂತ ಆಚೆ ಅವನು ವಿಸ್ತರಿಸಲಾರ. ವಿಸ್ತರಿಸಿದರೂ ಕತ್ತರಿಸುವ ಕೈಗಳು ಸಮಾಜದಲ್ಲೇ ಇದೆ. ಒಬ್ಬ ವಿಧ್ಯಾರ್ಥಿಯ ಮೇಲಿರುವ ತನ್ನ ಜವಾಬ್ದಾರಿಗಳನ್ನು ಆತ ಸಂಕುಚಿತಗೊಳಿಸಿಕೊಂಡಿದ್ದಾನೆ ಅಥವಾ ಹಾಗೇ ಮಾಡುವಂತೆ ನಿರ್ಬಂಧಿಸಲಾಗುತ್ತಿದೆ. ಈ ಶಿಕ್ಷಕನಿಗೆ ವೃತ್ತಿ ಪರತೆ ತುಂಬುವ ಪ್ರಯತ್ನ ನಡೆಯುತ್ತದೆಯೇ ಹೊರತು ಸಮಗ್ರತೆ ಮತ್ತು ಸಂಸ್ಕಾರವನಲ್ಲ. ಅವನಿಗೆ ಸಿಗದ ಸಂಸ್ಕಾರವನ್ನು ಅವ ಹೇಗೆ ತಾನೇ ತನ್ನ ವಿಧ್ಯಾರ್ಥಿಗಳಿಗೆ ಅಂದರೆ ಮುಂದಿನ ಪೀಳಿಗೆಗೆ ದಾಟಿಸಬಲ್ಲ?
ಈಗ ಮಕ್ಕಳಿಗೆ ಹೊಡೆಯುವಂತಿಲ್ಲ. ನಿಜ, ಯಾವ ರೀತಿಯ ಹೊಡೆತವೂ ಅಕ್ಷಮ್ಯವೇ. ಆದರೆ ಕೆಲ ಮಕ್ಕಳು ಪೆಟ್ಟು ತಿನ್ನದೇ ಸರಿಯಾಗುವುದಿಲ್ಲ. ಕಲ್ಲು ಮೂರ್ತಿಯಾಗುವುದು ಉಳಿ ಪೆಟ್ಟಿನಿಂದಾಗಿಯೇ ಹೊರತು ಪ್ರಾರ್ಥನೆಯಿಂದ ಅಲ್ಲ! ನಾ ಆಗಲೇ ಬರೆದಂತೆ ನಮ್ಮಲ್ಲಿ ಅಥವಾ ನಮ್ಮ ಹಿಂದಿನ ಪೀಳಿಗೆಯ ಬಹಳಷ್ಟು ಮಂದಿ ಮೇಷ್ಟ್ರ ಕೈಯಿಂದ ಪೆಟ್ಟು ತಿಂದೆ ಗಟ್ಟಿಯಾದವರು.
ಈಗ ಶಿಕ್ಷಕನ ಜ್ಞಾನಕ್ಕೂ ಅಷ್ಟೊಂದು ಮಹತ್ವವಿಲ್ಲ. ಅದು ಎಲ್ಲ ಕಡೆಯೂ ಸಿಗುವ ಸಂಗತಿಯಾಗಿ ಬಿಟ್ಟಿದೆ. ಮಕ್ಕಳನ್ನು ಬೇಕಾಬಿಟ್ಟಿ ಪಾಸ್ ಮಾಡಿಸಬೇಕೆಂಬ ಸರಕಾರದ ಹವಣಿಕೆಗೆ ಈ ಮೇಷ್ಟ್ರುಗಳು ಬಲಿಪಶುಗಳು. ಈ ಕ್ಷೇತ್ರದ ಮೇಲೆ ಮತ್ತು ಇಲ್ಲಿ ದುಡಿಯುವವರ ಮೇಲೆ ಇಡಬಹುದಾದ ನಂಬಿಕೆ ಧರಾಶಾಯಿಯಾಗುತ್ತಿದೆ. ಇದು ಜಾಗತಿಕರಣದ ಕೊಡುಗೆ. ಇಲ್ಲಿ ಶಿಕ್ಷಕನ ಮಾದರಿತನಕ್ಕೆ ಕುರುಹು ಆತ ವಿಧ್ಯಾರ್ಥಿಗಳಿಗೆ ತುಂಬಿರುವ ಆದರ್ಶವಲ್ಲ ಬದಲು ಆವರಿಗೆ ಉದ್ಯೋಗ ಲೋಕದಲ್ಲಿ ಐದಂಕಿ ಸಂಬಳ ಗಳಿಸುವ ಆರ್ಹತೆ ಇದೆಯಾ? ಎಂಬುದು. ಈಗ ಗುರುವಿಗೂ ಗುರಿ ಇಲ್ಲ ಇದ್ದರೂ ಆದಕ್ಕೇ ಬೆಲೆ ಇಲ್ಲ!
ನಾಳೆ
ಮಾನವ ಪಾಠ ಮಾಡುವುದು ಅನುಮಾನ. ಯಂತ್ರ ಮಾನವನಿಗೆ ಸಿಗಬಹುದು ಈ ಸ್ಥಾನಮಾನ. ಮಾನವ ಪಾಠ ಮಾಡಿದರೂ ಮಕ್ಕಳು ಮತ್ತು ಮೇಷ್ಟ್ರ ಮಧ್ಯೆ ಭಾವನಾ ಶೂನ್ಯತೆ ಆಥವಾ ನಿರ್ವಾತ ನೆಲೆ ಮಾಡಿರಬಹುದು. ಬಿಳಿ ಚಾಕ್, ಕರಿ ಬೋರ್ಡ್ ನಮ್ಮ ನೆನಪಿನ ಕೋಶ ಸೇರಿರಬಹುದು. ಸಮಾಜದ ದೃಷ್ಟಿಯಲ್ಲಿ ಮೇಷ್ಟ್ರು ಕೆಲಸಕ್ಕೂ ಕಾರಕೂನನ ಕೆಲಸಕ್ಕೂ ಒಂದಿನಿತೂ ವ್ಯತ್ಯಾಸ ಉಳಿದಿರಲಾರದು. ಈ ಮೇಷ್ಟ್ರುಗಳು ಮತ್ತವರು ಕಲಿಸಿದ ಪಾಠ ಎರಡು ವರ್ಷವೂ ವಿಧ್ಯಾರ್ಥಿಗಳ ಮನದಲ್ಲಿ ಬಾಳದೇ ಹೋಗಬಹುದು. ಮಗುವಿನ ಅಗತ್ಯಕ್ಕೂ ಮಿಗಿಲಾದ ಕಂಪ್ಯೂಟರ್ ಬಳಕೆ ಸೇರಿಕೊಳ್ಳಬಹುದು. ಶಿಸ್ತಿನ ಹೆಸರಲ್ಲಿ ಅನೇಕ ಸರ್ಕಸ್ ಗಳು ನಡೆಯಬಹುದು.
ಶಿಕ್ಷಕರ ದಿನಾಚರಣೆ ಮಾತ್ರ ಅದ್ದೂರಿಯಾಗಿ ಜರುಗಬಹುದು!
ಕಲಿಕೆ ಅಂದರೆ ಅದೊಂದು ತಪಸ್ಸು. ಕಲಿಯುವಿಕೆಯ ಹಂತಗಳಲ್ಲಿ ಗುರು ಶಿಷ್ಯರು ಪರಸ್ಪರ ವಶ ಮತ್ತು ವಿವಶ. ಗುರು ಕೊಡುವ ಶಿಕ್ಷೆ ಅಂದರೆ ಆದು ಆಶಿರ್ವಾದ ಸ್ವರೂಪ. ಅದರಲ್ಲೂ ಕಲಿಯುವಿಕೆಯ ಆನಂದ. ಗುರುವಿನ ಶಿಕ್ಷೆ ಆತನ ಮನಸ್ಸಿನ ಅಸಹನೆ, ದ್ವೇಷ, ಅಹಂ ಅಥವಾ ಹೆಂಡತಿ ಜೊತೆ ಜಗಳವಾಡಿದ ಕಾರಣದಿಂದ ಬರುತ್ತಿದ್ದಲ್ಲ. ಅದು ಸಹಜ, ಅನಿವಾರ್ಯ ಮತ್ತು ಶಿಷ್ಯನಲ್ಲಿ ಕಲಿಯುವಿಕೆಯ ಹಪಾಹಪಿ ಹುಟ್ಟಿಸುವಂತದ್ದು ಮತ್ತು ಆ ಕಲಿಕೆಗೆ ಸಮಗ್ರತೆಗೆ ತುಂಬುತ್ತಿತ್ತು. ಇದು ಇಂದಿನ ಶಿಕ್ಷಣ ವ್ಯವಸ್ಥೆಯಲ್ಲ, ಬದಲು ಗುರು ಪರಂಪರೆ. ಗುರುಕುಲವೇ ಅಂದಿನ ಜ್ಞಾನದೇಗುಲ.
ಅನಂತರ
ಈ ಗುರು ಪರಂಪರೆಯನ್ನು ಆವರಿಸಿಕೊಂಡದ್ದು ಶಿಕ್ಷಣ ವ್ಯವಸ್ಥೆ. ಇದು ಮೊಳಕೆಯೊಡೆದದ್ದು 1835ರಲ್ಲಿ. ಈ ವ್ಯವಸ್ಥೆಯ ಓಘ 1990ರ ತನಕ ಹೆಚ್ಚು ಕಡಿಮೆ ಒಂದೇ ರೀತಿಯಲ್ಲಿತ್ತು. ಇದೇ ಸಂದರ್ಭ ಭಾರತದ ಸ್ವಾತಂತ್ರ್ಯ ಹೋರಾಟ, ಅದರಲ್ಲಿನ ಗೆಲುವು ಮತ್ತು ಎಲ್ಲಾ ರೀತಿಯ ಐರೋಪ್ಯ ಮತ್ತು ಪೌರತ್ಯ ಪ್ರಣೀತ ಚಿಂತನೆಗಳು ಮತ್ತು ಸಾಧನಗಳು ನಮ್ಮ ನೆಲವನ್ನು ಪ್ರವೇಶಿಸಿದ್ದು. ಮತ್ತು ನಾವು ಕೂಡ ಆ ಸಂಗತಿಗಳಲ್ಲಿ ಸಾಧನೆ ಮಾಡಿದ್ದು. ಇದಕ್ಕೆಲ್ಲ ಕಲಶವಿಟ್ಟಂತೆ ಪ್ರಜಾಪ್ರಭುತ್ವವನ್ನು ನಮ್ಮ ಆಡಳಿತ ವಿಧಾನವಾಗಿ ಸ್ವೀಕರಿಸಿದ್ದು. ಈ ವ್ಯವಸ್ಥೆಯ ಸಮರ್ಪಕತೆಯ ಬಗ್ಗೆ ಪ್ರಶ್ನೆಗಳಿದ್ದರೂ ವಿದ್ಯೆಯನ್ನು ಸಾರ್ವತ್ರಿಕ ಮಾಡಿತು ಎಂಬುದನ್ನು ಅಲ್ಲಗಳೆಯುವಂತಿಲ್ಲ. ಉಳಿದಂತೆ ಇದರ ಒಳಿತು ಕೆಡುಕುಗಳು ಮತ್ತು ಈ ವ್ಯವಸ್ಥೆ ಹುಟ್ಟಿಕೊಳ್ಳಲು ಕಾರಣವಾದ ಸಂಗತಿಗಳು ಒತ್ತಟ್ಟಿಗಿರಲಿ. ಇಲ್ಲಿ 'ಗುರು' 'ಶಿಕ್ಷಕ'ನಾದ. ಆದರೆ ಆಶಯ ಬದಲಾಗಲಿಲ್ಲ, ಬರಡಾಗಲಿಲ್ಲ. ಕಾರಣವಿಷ್ಟೇ ಈ ವ್ಯವಸ್ಥೆ ಹೀರಿಕೊಂಡದ್ದು ಆ ಪರಂಪರೆಯಿಂದ!
ಆ ಶಿಕ್ಷಕ, ಮೇಷ್ಟ್ರು, ಟೀಚರ್, ಲೆಕ್ಚರರ್ ಅಂದರೆ ತುಂಬು ಗೌರವ ಅ ಗುರುವಿಗೆ ಸಂದಂತೆ ಇವರಿಗೂ ಸಲ್ಲುತ್ತಿತ್ತು. ಇಲ್ಲಿ ಅವರಿಗೆ ದೈವಂಶ ಸಂಭೂತರೆಂಬ ಪಟ್ಟವಿರದಿದ್ದರು ಬೀದಿಯಲ್ಲಿ ಅವರ ತಲೆ ಕಂಡರೆ ಸಾಕು ಹಿರಿಕಿರಿಯರೆನ್ನದೇ ಎಲ್ಲರಿಂದಲೂ ನಮಸ್ತೆಗಳ ಸುರಿಮಳೆ. ಅದೇನೂ ಒತ್ತಾಯಪೂರ್ವಕವಾಗಿ ಬರುತ್ತಿದ್ದದ್ದಲ್ಲ. ಅದು ಸಹಜ ಮತ್ತು ಭಕ್ತಿ ಪೂರ್ವಕ. ನಮ್ಮ ಹಳ್ಳಿಗಳಲ್ಲಿ ಈ ಟೀಚರ್ ಕೈಗೇ ಮಕ್ಕಳನ್ನು ಒಪ್ಪಿಸಿ ಅಂದರೆ ಶಾಲೆಗೆ ಕಳುಹಿಸಿದರೆ ಮನೆಮಂದಿಯಲ್ಲಿ ಅದೇನೋ ಒಂದು ಸಂತೃಪ್ತ ಭಾವ ಮತ್ತೊಂದು ಸುಂದರ ಕನಸು.
ಈ ವ್ಯವಸ್ಥೆಯಲ್ಲಿ ಪ್ರೀತಿಯಿಂದ ತೀಡುವ ವಿಠಲ ಮೇಷ್ಟ್ರು ಇದ್ದರು, ಕೋಲಿನಿಂದ ಬಡಿಯುವ ರುದ್ರಪ್ಪ ಮೇಷ್ಟ್ರು ಇದ್ದರು. ಅವೆಲ್ಲವನ್ನು, ಅವರೆಲ್ಲರನ್ನೂ ಮಕ್ಕಳು ಜೀರ್ಣಿಸಿಕೊಳ್ಳುತ್ತಿದ್ದರು ಅದಕ್ಕಿಂತ ಹೆಚ್ಚಾಗಿ ಹೆತ್ತವರು ಕೂಡ! ಆ ಪೆಟ್ಟಿನ ಭಯದಿಂದ ಕಲಿತು ಮಹನೀಯರಾದವರು ಬಹಳಷ್ಟು ಮಂದಿ. ನಮ್ಮ ನಮ್ಮ ಅಪ್ಪ ಅಮ್ಮಂದಿರೂ ಕೂಡ!
ಈಗ
ಹೊಡೆತಕ್ಕೆ ಬಿದ್ದಿದೆ ಫುಲ್ ಸ್ಟಾಪ್. ಸ್ವತಃ ಸರಕಾರವೇ ಈ ನಿರ್ದೆಶನವಿತ್ತಿದೆ. ಶಿಕ್ಷಣ ವ್ಯವಸ್ಥೆ, ಶಿಕ್ಷಣ ಕ್ಷೇತ್ರವಾಗಿದೆ. ಶಿಕ್ಷಕನದ್ದು ಒಂದು ವೃತ್ತಿ ಅಷ್ಟೆ. ಅದಕ್ಕಿಂತ ಆಚೆ ಅವನು ವಿಸ್ತರಿಸಲಾರ. ವಿಸ್ತರಿಸಿದರೂ ಕತ್ತರಿಸುವ ಕೈಗಳು ಸಮಾಜದಲ್ಲೇ ಇದೆ. ಒಬ್ಬ ವಿಧ್ಯಾರ್ಥಿಯ ಮೇಲಿರುವ ತನ್ನ ಜವಾಬ್ದಾರಿಗಳನ್ನು ಆತ ಸಂಕುಚಿತಗೊಳಿಸಿಕೊಂಡಿದ್ದಾನೆ ಅಥವಾ ಹಾಗೇ ಮಾಡುವಂತೆ ನಿರ್ಬಂಧಿಸಲಾಗುತ್ತಿದೆ. ಈ ಶಿಕ್ಷಕನಿಗೆ ವೃತ್ತಿ ಪರತೆ ತುಂಬುವ ಪ್ರಯತ್ನ ನಡೆಯುತ್ತದೆಯೇ ಹೊರತು ಸಮಗ್ರತೆ ಮತ್ತು ಸಂಸ್ಕಾರವನಲ್ಲ. ಅವನಿಗೆ ಸಿಗದ ಸಂಸ್ಕಾರವನ್ನು ಅವ ಹೇಗೆ ತಾನೇ ತನ್ನ ವಿಧ್ಯಾರ್ಥಿಗಳಿಗೆ ಅಂದರೆ ಮುಂದಿನ ಪೀಳಿಗೆಗೆ ದಾಟಿಸಬಲ್ಲ?
ಈಗ ಮಕ್ಕಳಿಗೆ ಹೊಡೆಯುವಂತಿಲ್ಲ. ನಿಜ, ಯಾವ ರೀತಿಯ ಹೊಡೆತವೂ ಅಕ್ಷಮ್ಯವೇ. ಆದರೆ ಕೆಲ ಮಕ್ಕಳು ಪೆಟ್ಟು ತಿನ್ನದೇ ಸರಿಯಾಗುವುದಿಲ್ಲ. ಕಲ್ಲು ಮೂರ್ತಿಯಾಗುವುದು ಉಳಿ ಪೆಟ್ಟಿನಿಂದಾಗಿಯೇ ಹೊರತು ಪ್ರಾರ್ಥನೆಯಿಂದ ಅಲ್ಲ! ನಾ ಆಗಲೇ ಬರೆದಂತೆ ನಮ್ಮಲ್ಲಿ ಅಥವಾ ನಮ್ಮ ಹಿಂದಿನ ಪೀಳಿಗೆಯ ಬಹಳಷ್ಟು ಮಂದಿ ಮೇಷ್ಟ್ರ ಕೈಯಿಂದ ಪೆಟ್ಟು ತಿಂದೆ ಗಟ್ಟಿಯಾದವರು.
ಈಗ ಶಿಕ್ಷಕನ ಜ್ಞಾನಕ್ಕೂ ಅಷ್ಟೊಂದು ಮಹತ್ವವಿಲ್ಲ. ಅದು ಎಲ್ಲ ಕಡೆಯೂ ಸಿಗುವ ಸಂಗತಿಯಾಗಿ ಬಿಟ್ಟಿದೆ. ಮಕ್ಕಳನ್ನು ಬೇಕಾಬಿಟ್ಟಿ ಪಾಸ್ ಮಾಡಿಸಬೇಕೆಂಬ ಸರಕಾರದ ಹವಣಿಕೆಗೆ ಈ ಮೇಷ್ಟ್ರುಗಳು ಬಲಿಪಶುಗಳು. ಈ ಕ್ಷೇತ್ರದ ಮೇಲೆ ಮತ್ತು ಇಲ್ಲಿ ದುಡಿಯುವವರ ಮೇಲೆ ಇಡಬಹುದಾದ ನಂಬಿಕೆ ಧರಾಶಾಯಿಯಾಗುತ್ತಿದೆ. ಇದು ಜಾಗತಿಕರಣದ ಕೊಡುಗೆ. ಇಲ್ಲಿ ಶಿಕ್ಷಕನ ಮಾದರಿತನಕ್ಕೆ ಕುರುಹು ಆತ ವಿಧ್ಯಾರ್ಥಿಗಳಿಗೆ ತುಂಬಿರುವ ಆದರ್ಶವಲ್ಲ ಬದಲು ಆವರಿಗೆ ಉದ್ಯೋಗ ಲೋಕದಲ್ಲಿ ಐದಂಕಿ ಸಂಬಳ ಗಳಿಸುವ ಆರ್ಹತೆ ಇದೆಯಾ? ಎಂಬುದು. ಈಗ ಗುರುವಿಗೂ ಗುರಿ ಇಲ್ಲ ಇದ್ದರೂ ಆದಕ್ಕೇ ಬೆಲೆ ಇಲ್ಲ!
ನಾಳೆ
ಮಾನವ ಪಾಠ ಮಾಡುವುದು ಅನುಮಾನ. ಯಂತ್ರ ಮಾನವನಿಗೆ ಸಿಗಬಹುದು ಈ ಸ್ಥಾನಮಾನ. ಮಾನವ ಪಾಠ ಮಾಡಿದರೂ ಮಕ್ಕಳು ಮತ್ತು ಮೇಷ್ಟ್ರ ಮಧ್ಯೆ ಭಾವನಾ ಶೂನ್ಯತೆ ಆಥವಾ ನಿರ್ವಾತ ನೆಲೆ ಮಾಡಿರಬಹುದು. ಬಿಳಿ ಚಾಕ್, ಕರಿ ಬೋರ್ಡ್ ನಮ್ಮ ನೆನಪಿನ ಕೋಶ ಸೇರಿರಬಹುದು. ಸಮಾಜದ ದೃಷ್ಟಿಯಲ್ಲಿ ಮೇಷ್ಟ್ರು ಕೆಲಸಕ್ಕೂ ಕಾರಕೂನನ ಕೆಲಸಕ್ಕೂ ಒಂದಿನಿತೂ ವ್ಯತ್ಯಾಸ ಉಳಿದಿರಲಾರದು. ಈ ಮೇಷ್ಟ್ರುಗಳು ಮತ್ತವರು ಕಲಿಸಿದ ಪಾಠ ಎರಡು ವರ್ಷವೂ ವಿಧ್ಯಾರ್ಥಿಗಳ ಮನದಲ್ಲಿ ಬಾಳದೇ ಹೋಗಬಹುದು. ಮಗುವಿನ ಅಗತ್ಯಕ್ಕೂ ಮಿಗಿಲಾದ ಕಂಪ್ಯೂಟರ್ ಬಳಕೆ ಸೇರಿಕೊಳ್ಳಬಹುದು. ಶಿಸ್ತಿನ ಹೆಸರಲ್ಲಿ ಅನೇಕ ಸರ್ಕಸ್ ಗಳು ನಡೆಯಬಹುದು.
ಶಿಕ್ಷಕರ ದಿನಾಚರಣೆ ಮಾತ್ರ ಅದ್ದೂರಿಯಾಗಿ ಜರುಗಬಹುದು!
Saturday, September 5, 2009
ನ್ಯಾನೋಗೆ ಉತ್ತರವಾಗಬಲ್ಲದೇ ರೈನೋ?
ನ್ಯಾನೋ ಕಾರು ಆರ್ಥಿಕವಾಗಿ ಎಷ್ಟು ಮುಖ್ಯವಾಗಿದೆಯೋ ಅಷ್ಟೇ ಮುಖ್ಯವಾಗಿ ಅದು ನಮ್ಮ ಚಿಂತನಕ್ರಮದಲ್ಲೊಂದು ಬದಲಾವಣೆ ತಂದಿದೆ. ಇಂದು ಬಹುತೇಕ ಕಾರು ಉತ್ಪಾದಕರು ಚಿಕ್ಕ ಕಾರು ತಯಾರಿಸುವತ್ತ ಗಮನಹರಿಸುತ್ತಿರುವಾಗಲೇ ಬೆಂಗಳೂರಿನ ಮೆಕ್ಯಾನಿಕಲ್ ಇಂಜಿನಿಯರೊಬ್ಬರು ಅದನ್ನು ಸಾಧಿಸಿ ತೋರಿಸಿದ್ದಾರೆ.
'ರೈನೋ' ಎಂಬ ನಾಮಧೇಯದ ಈ ಕಾರು ನೋಡಲು ರೈನೋಸಾರಸ್ ನಂತೆಯೆ ಇದೆ.ಅಚ್ಚರಿಯೆಂದರೇ ರೈನೋ ಬರೀ 150 ಕೆಜಿ ತೂಗುತ್ತದೆ. ಆದರೆ 30 ರಿಂದ 35 ಕಿ.ಮೀ ಮೈಲೇಜ್ ಕೊಡುತ್ತದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಸರಾಗವಾಗಿ ಚಲಿಸಬಲ್ಲದು.ನಾಲ್ಕು ಫೀಟ್ ಅಗಲ, ನಾಲ್ಕು ಫೀಟ್ ಎತ್ತರ ಮತ್ತು ಎಂಟು ಫೀಟ್ ಉದ್ದವಿರುವ ಈ ಕಾರಲ್ಲಿ ಡ್ರೈವರ್ ಸೇರಿ ಇಬ್ಬರು ಕೂರಬಹುದು. 25 ಕೆ.ಜಿ ಲಗೇಜ್ ಇಟ್ಟುಕೊಳ್ಳಬಹುದು.ಮಡಚಬಹುದಾದ ಸ್ಟೇರಿಂಗ್ ಮತ್ತು ಒಂದೇ ಬಾಗಿಲು ಈ ಕಾರಿನ ವೈಶಿಷ್ಟ್ಯ. ಯಾವುದೇ ಇಂಜಿನ್ ಕೂಡ ಬಳಸಬಹುದು.ಗೇರ್ ವ್ಯವಸ್ಥೆ ಇರುವ ಕಾರು ಇದಾಗಿರುವುದರಿಂದ ಎತ್ತರ ಪ್ರದೇಶಕ್ಕೂ ನಿರಾಯಾಸವಾಗಿ ಚಲಿಸಬಲ್ಲದು ಆದರೆ ಚಕ್ರ ಚಿಕ್ಕದಾಗಿರುವುದರಿಂದ ಗುಂಡಿಗಳಿರುವ ರಸ್ತೆಯಾದ್ರೆ ಸ್ವಲ್ಪ ಕಷ್ಟ, ಆದರೆ
ದೊಡ್ಡ ಚಕ್ರವನ್ನು ಬೇಕಾದರೆ ಆಳವಡಿಸಿಕೊಳ್ಳಬಹುದು ಎಂಬುದು ನಿರ್ಮಾತೃವಿನ ಅಭಿಪ್ರಾಯ.
ಬೆಂಗಳೂರಿನ ಪಾರ್ಕಿಂಗ್ ಸಮಸ್ಯೆಯಿಂದ ಬೇಸತ್ತು ಅದಕ್ಕೆ ಪರಿಹಾರವಾಗಿ ನಾನು ಈ ಕಾರು ತಯಾರಿಸುವ ನಿಟ್ಟಿನಲ್ಲಿ ಯೋಚಿಸಿದೆ ಎನ್ನುತ್ತಾರೆ ಇದರ ರೂವಾರಿ ನರಸಿಂಹರಾಜು. ಇಂಜಿನ್ ಮತ್ತು ಚಕ್ರಗಳನ್ನು ಹೊರತು ಪಡಿಸಿದರೆ ಉಳಿದೆಲ್ಲವನ್ನು ನಾನೇ ವಿನ್ಯಾಸ ಮಾಡಿಕೊಂಡೆ ಎನ್ನುತ್ತಾರವರು. ಅಂಗವಿಕಲರಿಂದ ಈ ಕಾರಿಗೆ ಹೆಚ್ಚಿನ ಬೇಡಿಕೆ ಇದೆ ಆದರೆ ಕ್ಲಚ್ ಮತ್ತು ಬ್ರೇಕ್ ಕಾಲಲ್ಲೇ ಉಪಯೋಗಿಸುವ ರೀತಿಯಲ್ಲಿ ವಿನ್ಯಾಸವಿರುವುದರಿಂದ ಅದರ ಬಳಕೆಗೆ ಕಷ್ಟವಾಗಬಹುದು ಅದ್ದರಿಂದ ಅವನ್ನು ಕೈಯಿಂದ ಬಳಸುವಂತೆ ರೂಪಿಸುವ ದಿಸೆಯಲ್ಲಿ ಅವರು ಗಂಭೀರವಾಗಿ ಚಿಂತಿಸುತ್ತಿದ್ದಾರೆ.ನನ್ನಿಂದ ಇದರ ಬೃಹತ್ ಪ್ರಮಾಣದ ಉತ್ಪಾದನೆ ಸಾಧ್ಯವಿಲ್ಲ, ದೊಡ್ಡ ಕಂಪೆನಿಗಳು ಮುಂದೆ ಬಂದರೆ ನಾನು ಇದರ ತಂತ್ರಜ್ಙಾನ ಕೊಡುತ್ತೇನೆ ಎನ್ನುವ ಇವರು ಹೀಗಾದರೆ ಈ ಕಾರು ರೂ. 80,000ಕ್ಕೆ ಗ್ರಾಹಕರ ಕೈಸೇರಬಹುದು ಎಂದು ಅಭಿಪ್ರಾಯ ಪಡುತ್ತಾರೆ. ಕಿಸೆಗೂ, ರಸ್ತೆಗೂ ಹಗುರವಾಗಿರುವ ಈ ಕಾರು ಅದಷ್ಟೂ ಬೇಗ ನಮ್ಮ ರಸ್ತೆಗಳಲ್ಲಿ ಓಡುವಂತಾದರೆ ಅನೇಕರ ಕಾರು ಕೊಳ್ಳುವ ಕನಸು ನನಸಾಗಬಹುದು. ಹಾಗೆಯೇ ನಗರಗಳ ಪಾರ್ಕಿಂಗ್ ಸಮಸ್ಯೆ ಕೂಡ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು.
ಇವರ ಪ್ರಯೋಗಶೀಲತೆ ಇಷ್ಟಕ್ಕೆ ಸೀಮಿತವಾಗಿಲ್ಲ. ಗ್ರಾಮೀಣ ಜನತೆಯನ್ನು ಗಮನವಿಟ್ಟುಕೊಂಡು ಸೈಕಲ್ ಗೆ ಶಾಕ್ ಅಬ್ಸರ್ವರ್ ಅಳವಡಿಸುವ ಪ್ರಯತ್ನ ಮಾಡಿ ಅದರಲ್ಲೂ ಯಶ ಕಂಡಿದ್ದಾರೆ. ಇದು ಬೆನ್ನು ನೋವಿನಿಂದ ನರಳುತ್ತಿರುವವರಿಗೆ ಉಪಯುಕ್ತ ಎಂಬುದು ಅವರ ಅನಿಸಿಕೆ. ರಕ್ಷಣಾ ಉದ್ದೇಶಕ್ಕೆ ಬಳಸಬಹುದಾದ ರೊಬೊಟ್ ಕೂಡ ಇವರ ಕೈಯಲ್ಲಿ ರೂಪುಗೊಂಡಿದೆ. ಇದನ್ನು ರಿಮೋಟ್ ಕಂಟ್ರೋಲ್ ಬಳಸಿ ನಿಯಂತ್ರಸಬಹುದಾಗಿದ್ದು ತನ್ನ ಕೈಯಲ್ಲಿ ಮೂರು ಕೆಜಿ ಭಾರ
ಎತ್ತಿ ಅದನ್ನು ಅತ್ತಿತ್ತ ಕೊಂಡೊಯ್ಯಬಲ್ಲದು ಅಲ್ಲದೆ ಅದನ್ನು ನಾಶಮಾಡಬಲ್ಲದು. ಇದು ಬಾಂಬ್ ನಿಷ್ಕ್ರೀಯಗೊಳಿಸಲು ಸಹಕಾರಿ. ತಲೆ ಮೇಲೆ ಗನ್ ಇಟ್ಟುಕೊಳ್ಳುವ ವ್ಯವಸ್ಥೆಯಿದ್ದು ಅದನ್ನು 360 ಡಿಗ್ರಿಯಷ್ಟು ತಿರುಗಿಸಬಹುದಾಗಿದೆ. ಮೇಲೆ ಕೆಳಗೆ ಚಲಿಸುವಂತೆಯೂ ಮಾಡಬಹುದು. ಇದು ಶತ್ರುಗಳ ಮೇಲೆ ಗುಂಡಿನ ದಾಳಿ ನಡೆಸಲು ಉಪಯುಕ್ತ. ಇದು ಚಕ್ರದ ಸಹಾಯದಿಂದ ಚಲಿಸುತ್ತದೆ ಅದುದರಿಂದ ಸಮತಟ್ಟಾದ ಜಾಗಗಳಲ್ಲಿ ಮಾತ್ರ ಇದರ ಬಳಕೆ ಸಾಧ್ಯ. ಅದರೆ ಚಕ್ರದ ಬದಲು ಟ್ರ್ಯಾಕ್ ಬಳಸಿ ಗುಡ್ಡಗಾಡು ಪ್ರದೇಶಗಳಲ್ಲೂ ಇದನ್ನು ಬಳಸುವಂತೆ ಮಾಡಬಹುದಾಗಿದೆ.
ಇದರೊಂದಿಗೆ ರೋಟಿ ಮೇಕರ್ ಎಂಬ ಅಡುಗೆ ಮನೆಯಲ್ಲಿ ಬಳಸುವ ಉಪಕರಣವೊಂದನ್ನು ಅವರು ತಯಾರಿಸಿದ್ದು ಇದರ ಸಹಾಯದಿಂದ ಅರೆ ನಿಮಿಷದಲ್ಲಿ ಎಣ್ಣೆ ರಹಿತ ಚಪಾತಿ ಮಾಡಲು ಸಾಧ್ಯ. ಇನ್ನು ಬೆಂಗಳೂರಿನ ಚರಂಡಿ, ಮೋರಿಗಳಲ್ಲಿ ಹರಿದ ವ್ಯರ್ಥವಾಗುತ್ತಿರುವ ಕೊಳಚೆ ನೀರನ್ನು ಬಳಸಿ ವಿದ್ಯುತ್ ತಯಾರಿಸುವ ಹಂಬಲ ಇವರದ್ದು. ಆಸಕ್ತರು ನರಸಿಂಹರಾಜು ಅವರನ್ನು (9845115142) ಸಂಪರ್ಕಿಸಬಹುದು.
ದೊಡ್ಡ ಚಕ್ರವನ್ನು ಬೇಕಾದರೆ ಆಳವಡಿಸಿಕೊಳ್ಳಬಹುದು ಎಂಬುದು ನಿರ್ಮಾತೃವಿನ ಅಭಿಪ್ರಾಯ.
ಬೆಂಗಳೂರಿನ ಪಾರ್ಕಿಂಗ್ ಸಮಸ್ಯೆಯಿಂದ ಬೇಸತ್ತು ಅದಕ್ಕೆ ಪರಿಹಾರವಾಗಿ ನಾನು ಈ ಕಾರು ತಯಾರಿಸುವ ನಿಟ್ಟಿನಲ್ಲಿ ಯೋಚಿಸಿದೆ ಎನ್ನುತ್ತಾರೆ ಇದರ ರೂವಾರಿ ನರಸಿಂಹರಾಜು. ಇಂಜಿನ್ ಮತ್ತು ಚಕ್ರಗಳನ್ನು ಹೊರತು ಪಡಿಸಿದರೆ ಉಳಿದೆಲ್ಲವನ್ನು ನಾನೇ ವಿನ್ಯಾಸ ಮಾಡಿಕೊಂಡೆ ಎನ್ನುತ್ತಾರವರು. ಅಂಗವಿಕಲರಿಂದ ಈ ಕಾರಿಗೆ ಹೆಚ್ಚಿನ ಬೇಡಿಕೆ ಇದೆ ಆದರೆ ಕ್ಲಚ್ ಮತ್ತು ಬ್ರೇಕ್ ಕಾಲಲ್ಲೇ ಉಪಯೋಗಿಸುವ ರೀತಿಯಲ್ಲಿ ವಿನ್ಯಾಸವಿರುವುದರಿಂದ ಅದರ ಬಳಕೆಗೆ ಕಷ್ಟವಾಗಬಹುದು ಅದ್ದರಿಂದ ಅವನ್ನು ಕೈಯಿಂದ ಬಳಸುವಂತೆ ರೂಪಿಸುವ ದಿಸೆಯಲ್ಲಿ ಅವರು ಗಂಭೀರವಾಗಿ ಚಿಂತಿಸುತ್ತಿದ್ದಾರೆ.ನನ್ನಿಂದ ಇದರ ಬೃಹತ್ ಪ್ರಮಾಣದ ಉತ್ಪಾದನೆ ಸಾಧ್ಯವಿಲ್ಲ, ದೊಡ್ಡ ಕಂಪೆನಿಗಳು ಮುಂದೆ ಬಂದರೆ ನಾನು ಇದರ ತಂತ್ರಜ್ಙಾನ ಕೊಡುತ್ತೇನೆ ಎನ್ನುವ ಇವರು ಹೀಗಾದರೆ ಈ ಕಾರು ರೂ. 80,000ಕ್ಕೆ ಗ್ರಾಹಕರ ಕೈಸೇರಬಹುದು ಎಂದು ಅಭಿಪ್ರಾಯ ಪಡುತ್ತಾರೆ. ಕಿಸೆಗೂ, ರಸ್ತೆಗೂ ಹಗುರವಾಗಿರುವ ಈ ಕಾರು ಅದಷ್ಟೂ ಬೇಗ ನಮ್ಮ ರಸ್ತೆಗಳಲ್ಲಿ ಓಡುವಂತಾದರೆ ಅನೇಕರ ಕಾರು ಕೊಳ್ಳುವ ಕನಸು ನನಸಾಗಬಹುದು. ಹಾಗೆಯೇ ನಗರಗಳ ಪಾರ್ಕಿಂಗ್ ಸಮಸ್ಯೆ ಕೂಡ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು.
ಇವರ ಪ್ರಯೋಗಶೀಲತೆ ಇಷ್ಟಕ್ಕೆ ಸೀಮಿತವಾಗಿಲ್ಲ. ಗ್ರಾಮೀಣ ಜನತೆಯನ್ನು ಗಮನವಿಟ್ಟುಕೊಂಡು ಸೈಕಲ್ ಗೆ ಶಾಕ್ ಅಬ್ಸರ್ವರ್ ಅಳವಡಿಸುವ ಪ್ರಯತ್ನ ಮಾಡಿ ಅದರಲ್ಲೂ ಯಶ ಕಂಡಿದ್ದಾರೆ. ಇದು ಬೆನ್ನು ನೋವಿನಿಂದ ನರಳುತ್ತಿರುವವರಿಗೆ ಉಪಯುಕ್ತ ಎಂಬುದು ಅವರ ಅನಿಸಿಕೆ. ರಕ್ಷಣಾ ಉದ್ದೇಶಕ್ಕೆ ಬಳಸಬಹುದಾದ ರೊಬೊಟ್ ಕೂಡ ಇವರ ಕೈಯಲ್ಲಿ ರೂಪುಗೊಂಡಿದೆ. ಇದನ್ನು ರಿಮೋಟ್ ಕಂಟ್ರೋಲ್ ಬಳಸಿ ನಿಯಂತ್ರಸಬಹುದಾಗಿದ್ದು ತನ್ನ ಕೈಯಲ್ಲಿ ಮೂರು ಕೆಜಿ ಭಾರ
ಎತ್ತಿ ಅದನ್ನು ಅತ್ತಿತ್ತ ಕೊಂಡೊಯ್ಯಬಲ್ಲದು ಅಲ್ಲದೆ ಅದನ್ನು ನಾಶಮಾಡಬಲ್ಲದು. ಇದು ಬಾಂಬ್ ನಿಷ್ಕ್ರೀಯಗೊಳಿಸಲು ಸಹಕಾರಿ. ತಲೆ ಮೇಲೆ ಗನ್ ಇಟ್ಟುಕೊಳ್ಳುವ ವ್ಯವಸ್ಥೆಯಿದ್ದು ಅದನ್ನು 360 ಡಿಗ್ರಿಯಷ್ಟು ತಿರುಗಿಸಬಹುದಾಗಿದೆ. ಮೇಲೆ ಕೆಳಗೆ ಚಲಿಸುವಂತೆಯೂ ಮಾಡಬಹುದು. ಇದು ಶತ್ರುಗಳ ಮೇಲೆ ಗುಂಡಿನ ದಾಳಿ ನಡೆಸಲು ಉಪಯುಕ್ತ. ಇದು ಚಕ್ರದ ಸಹಾಯದಿಂದ ಚಲಿಸುತ್ತದೆ ಅದುದರಿಂದ ಸಮತಟ್ಟಾದ ಜಾಗಗಳಲ್ಲಿ ಮಾತ್ರ ಇದರ ಬಳಕೆ ಸಾಧ್ಯ. ಅದರೆ ಚಕ್ರದ ಬದಲು ಟ್ರ್ಯಾಕ್ ಬಳಸಿ ಗುಡ್ಡಗಾಡು ಪ್ರದೇಶಗಳಲ್ಲೂ ಇದನ್ನು ಬಳಸುವಂತೆ ಮಾಡಬಹುದಾಗಿದೆ.
ಇದರೊಂದಿಗೆ ರೋಟಿ ಮೇಕರ್ ಎಂಬ ಅಡುಗೆ ಮನೆಯಲ್ಲಿ ಬಳಸುವ ಉಪಕರಣವೊಂದನ್ನು ಅವರು ತಯಾರಿಸಿದ್ದು ಇದರ ಸಹಾಯದಿಂದ ಅರೆ ನಿಮಿಷದಲ್ಲಿ ಎಣ್ಣೆ ರಹಿತ ಚಪಾತಿ ಮಾಡಲು ಸಾಧ್ಯ. ಇನ್ನು ಬೆಂಗಳೂರಿನ ಚರಂಡಿ, ಮೋರಿಗಳಲ್ಲಿ ಹರಿದ ವ್ಯರ್ಥವಾಗುತ್ತಿರುವ ಕೊಳಚೆ ನೀರನ್ನು ಬಳಸಿ ವಿದ್ಯುತ್ ತಯಾರಿಸುವ ಹಂಬಲ ಇವರದ್ದು. ಆಸಕ್ತರು ನರಸಿಂಹರಾಜು ಅವರನ್ನು (9845115142) ಸಂಪರ್ಕಿಸಬಹುದು.
Thursday, August 13, 2009
ಅವಳನ್ನು ಅದು ಹೇಗೆ ತಾನೇ ಕಥೆ ಮಾಡಲಿ?
ನಾನು 'ಅವಳ' ಹೆಸರು ಬರೆಯುವಂತಿಲ್ಲ. ಯಾಕೆಂದರೆ 'ಅವಳು' ಯಾರೆಂದು ನನ್ನ ಹತ್ತಿರದವರಿಗೆ ಗೊತ್ತಾಗಿ ಬಿಡುತ್ತದೆ. ಅದಕ್ಕಿಂತ ಹೆಚ್ಚಾಗಿ 'ಅವಳಿಗೆ' ಅದು 'ಅವಳೇ' ಎಂದು ಗೊತ್ತಾಗುತ್ತದೆ. ಅದು 'ಅವಳೇ' ಎಂದು 'ಅವಳಿಗೆ' ಗೊತ್ತಾದರೆ 'ಅವಳು' 'ಅವಳಾಗಿ'ಯೇ ಇರುವುದಿಲ್ಲ. (ಈಗ ಹಾಗೆ ಇದ್ದಾಳೆ ಎಂದೇನೂ ನನಗನಿಸುತ್ತಿಲ್ಲ). ಅದು ಮತ್ತೊಂದು ಬಿರುಗಾಳಿಗೆ ಕಾರಣವಾಗುತ್ತದೆ. ಮತ್ತವಳು ಏರಿರುವ ಸಂಸಾರ ನೌಕೆಯಲ್ಲಿ ಅನಾಮತ್ತಾಗಿ ಒಂದು ಬಿರುಕು ಸೃಷ್ಟಿಯಾಗುತ್ತದೆ. ನನಗದು ಇಷ್ಟವಾಗದ ಸಂಗತಿ.
ಇಲ್ಲ, ಅದು 'ಅವಳೇ' ಎಂದು 'ಅವಳಿಗೆ' ಗೊತ್ತಾಗಬಾರದು ಹಾಗೆಯೇ ನಮ್ಮಿಬ್ಬರ ಬಗ್ಗೆ ಗೊತ್ತಿರುವ ಯಾರಿಗೂ ಕೂಡ. ಅದರಲ್ಲೂ ನನ್ನ ಬರವಣಿಗೆಯ ಸೂಕ್ಷ್ಮ ವಿಮರ್ಶಕನಾಗಿರುವ 'ಅವಳ' ಗಂಡನಿಗೆ!
ನಾನು ಏನೇ ಬರೆದರೂ ಅದು ನಮ್ಮಿಬ್ಬರ ನಡುವೆ ನಡೆದ ಯಾವುದೇ ಘಟನೆಯನ್ನು ಪುನರಪಿ ನೆನಪಿಸಲೇ ಬಾರದು. ನೆನಪಿಸಿದರೂ ಅದು ಯಾರ ಜತೆಗೂ ನಡೆಯುವಂತದ್ದೆ ಎಂದು 'ಅವಳು' ಸಹಿತ ಎಲ್ಲರಿಗೂ ಅನಿಸಿ ಬಿಡಬೇಕು. ಅದರಲ್ಲಿ 'ವಿಶೇಷ' ಕಾಣಲೇಬಾರದು.
ನಾ ಬರೆಯುವ ಯಾವ ಪದವೂ ನಮ್ಮ 'ಗೌಪ್ಯ ಪದಕೋಶ'ದಲ್ಲಿದ್ದಿರಬಾರದು. ಅದರ ಬಗ್ಗೆ ನಮ್ಮ ಹತ್ತಿರವರಿಗೆ ಯಾವುದೇ 'ಕ್ಲೂ' ಸಿಗಲೇಬಾರದು. ನಾ ವರ್ಣಿಸುವ ಸ್ಥಳ, ಸನ್ನಿವೇಶ, ಭಾವನೆಗಳೆಲ್ಲವೂ ಅಪರಿಚಿತವೆನಿಸಬೇಕು. ಇಲ್ಲ, ತೀರಾ ಪರಿಚಿತವೆಂದೆನಿಸಿ ಅದು 'ಸಾಮಾನ್ಯೀಕರಣ'ಕ್ಕೊಳಗಾಗಬೇಕು. ಅದರಲ್ಲಿ ನನ್ನ ಅವಳ ಪ್ರೀತಿ, ಒಡನಾಟ, ಮತ್ತೊಂದಿಷ್ಟು ಕಣ್ಣಾಮುಚ್ಚಾಲೆ ವ್ಯವಹಾರಗಳ ಚಿತ್ರಣ ಅವಳಲ್ಲಿ ಇವ 'ಇನ್ಯಾರನ್ನೋ ಇಟ್ಟು ಕೊಂಡಿದ್ನ' ಎಂಬ ಅನುಮಾನ ಮೂಡಿಸಬೇಕು.
ಅದೇ ನಮ್ಮ ಹತ್ತಿರದವರಿದ್ದಾರಲ್ಲ, ಅವರು ಅದ್ಯಾವ ಹುಡುಗಿ ಎಂದು ತಲೆ ಕೆರೆದುಕೊಂಡು, ಕುತೂಹಲದ ಹಿಮಾಲಯ ಏರಿ, ಕಾಲ್ ಮಾಡಿ ಅದ್ಯಾರು ಅಂತ ಹೇಳೋ ಪ್ಲೀಸ್... ಎಂದು ಗೋಗರೆಯಬೇಕು. ಹೇಳು ನಾವು ಯಾರಿಗೂ ಹೇಳುವುದಿಲ್ಲ ಎಂದು ಆಣೆಗಳ ಸುರಿಮಳೆ ಸುರಿಸಿ ನಂತರ ಆಧುನಿಕವಾಗಿ ಚಿಂತಿಸಿ ಬಾಂಡ್ ಪೇಪರ್ ಮೇಲೆ ಸಹಿ ಹಾಕೋ ಮಟ್ಟಕ್ಕೆ ಬರಬೇಕು, ನಮ್ಮ ಮೇಲೆ ನಿನಗೆ ನಂಬಿಕೆ ಇಲ್ವಾ? ಎಂದು ಅವರು ಕೇಳ ಬೇಕು. ಇನ್ನೂ ಹತ್ತಿರವರು ನನ್ನ ಕಾಲರ್ ಹಿಡಿದು ಕೇಳುವ ಸ್ಥಿತಿಗೆ ಬರಬೇಕು. ಊಹೂಂ ಅದರು ಅವರಿಗೆ 'ಅವಳು' ಯಾರು ಎಂದು ಗೊತ್ತಾಗಲೇ ಬಾರದು.
ಬರವಣಿಗೆಯಲ್ಲಿನ ಯಾವುದೇ ಹೆಸರಿನ ಯಾವುದೇ ಪದ ಕೂಡ 'ಅವಳ' ಹೆಸರನ್ನು ಸೂಚಿಸಲೇಬಾರದು. ಒಂದು ಸತ್ಯ ಹೇಳಿದರೆ ಆ ಸತ್ಯವನ್ನು ಸುಳ್ಳು ಮಾಡುವ ನೂರು ಸುಳ್ಳು ಹೇಳಬೇಕು. ಅಥವಾ ನೂರು ಸತ್ಯ ಹೇಳಿ ಒಂದು 'ದೊಡ್ಡ' ಸುಳ್ಳು ಹೇಳಿದರೂ ಆಗುತ್ತದೆ.
ಅವಳ ರೂಪ, ಗುಣ, ಹಾವಭಾವಗಳೆಲ್ಲವನ್ನೂ ಗೊಂದಲ ಹುಟ್ಟಿಸುವಂತೆ ಹೇಳಬೇಕು. ಬೇಡ, ಅದು ಹೇಗೆ ಬರೆದರೂ ಅವಳಿಗೆ ಅದು 'ಅವಳೇ' ಎಂಬ ಅನುಮಾನ ಬಂದೇ ಬರುತ್ತದೆ. ಅವಳಿಗೆ ಬಾರದಿದ್ದರೂ ಅವಳ ಬಗ್ಗೆ ಮನಸಲ್ಲೇ ಮಂಡಿಗೆ ಮೆಲ್ಲುತ್ತಿದ್ದರಿಗಂತೂ ಬಂದೇ ಬರುತ್ತದೆ. ಇದರ ಸಹವಾಸವೇ ಬೇಡ. ಅವಳು ಬಳಸುತ್ತಿದ್ದ ವಸ್ತು, ಇಷ್ಟಪಡುವ ತಿಂಡಿ ತಿನಿಸು, ನಟ ನಟಿ, ಬಣ್ಣ ಹೀಗೆ ಇನ್ನೇನೋ ಗಳನ್ನು ರೂಪಕವಾಗಿ ಬಳಸೋಣ... ಅಂದರೆ ಅದು ಹೆಚ್ಚಿನವರಿಗೆ ಗೊತ್ತಿದೆ.
"ಇಲ್ಲಿನ ಎಲ್ಲ ಸನ್ನಿವೇಶ, ಪಾತ್ರ ಹಾಗೂ ಸಂಭಾಷಣೆಗಳು ಕೇವಲ ಕಾಲ್ಪನಿಕ. ಇದಕ್ಕೂ ನೈಜ ಘಟನೆಗಳಿಗೂ ಯಾವುದೇ ಸಂಬಂಧವಿದೆ ಎಂದೆನಿಸಿದರೆ ಅದು ಕೇವಲ ಕಾಕತಾಳೀಯ" ಎಂದು ಕಥೆಯ ಆರಂಭದಲ್ಲಿ ಬರೆದು ಬಿಟ್ಟರೇ...? ಆದರೆ ಈ ಸಾಲುಗಳು ನಂಬಿಕೆ ಹುಟ್ಟಿಸುವ ಸಾಮರ್ಥ್ಯ ಕಳೆದುಕೊಂಡು ತುಂಬ ಸಮಯವಾಗಿದೆ.
ಈಗೇನು ಮಾಡಲಿ? ನನಗೆ 'ಅದನ್ನು' ಬರೆಯಲೇ ಬೇಕು. ಆದರೆ ಅದರಲ್ಲಿರುವ 'ಅವಳನ್ನು' ಏನು ಮಾಡೋದು?
'ಅವಳ' ಕಥೆ ನನ್ನ ಮನದಲ್ಲಿ ಗರ್ಭಂಕುರವಾಗಿ ಕೆಲ ಸಮಯಗಳೇ ಸಾಗಿದೆ... ಅದನ್ನು ಗರ್ಭಪಾತ ಮಾಡಿಸಲು ನನಗೆ ಸುತಾರಾಂ ಇಷ್ಟವಿಲ್ಲ. ಅದು ನನ್ನ ಬರವಣಿಗೆಯ ಸೋಲು ಅಥವಾ ಅತ್ಮಹತ್ಯೆ. ಹಾಗೇ ಅಥವಾ ಹೀಗೆ ಜನ್ಮ ನೀಡಲು ಸಾಧ್ಯವಿಲ್ಲ, ಅದು ಅವಳ ಬದುಕಿನ ಪ್ರಶ್ನೆ... ಈಗ ತಾನೇ ಗಂಡನ ಮನೆ ಸೇರಿ ಆತನ ಬಿಸಿಯುಸಿರಿಗೆ ಕರಗುತ್ತಿರುವವಳು ನನ್ನ ಬಿಸಿಯುಸಿರಿಗೂ ಕರಗಿದ್ದಳು ಎಂದು 'ಅವನಿಗೆ' ಗೊತ್ತಾದರೆ ನಂತರ 'ಅವಳ' ಉಸಿರೆಲ್ಲ ಬಿಸಿಯೇ. ಆಕೆಯ ಆ ಬಿಸಿ ಉಸಿರಿನ ತಾಪಕ್ಕೆ ನನ್ನ ಬರವಣಿಗೆಯ ಸೆಲೆ ಬತ್ತಿ ಹೋಗಬಹುದು. ಅಲ್ಲಿಗೆ ನನ್ನ ಬರವಣಿಗೆಯ ಶವಸಂಸ್ಕಾರವೂ ನಡೆದು ಹೋಗುತ್ತದೆ! ಕಥೆಯಾಗಲೇ ಬೇಕಾದ ಹುಡುಗಿಯನ್ನು ಅದು ಹೇಗೆ ತಾನೇ ಕಥೆ ಮಾಡಲಿ?
ಇಲ್ಲ, ಅದು 'ಅವಳೇ' ಎಂದು 'ಅವಳಿಗೆ' ಗೊತ್ತಾಗಬಾರದು ಹಾಗೆಯೇ ನಮ್ಮಿಬ್ಬರ ಬಗ್ಗೆ ಗೊತ್ತಿರುವ ಯಾರಿಗೂ ಕೂಡ. ಅದರಲ್ಲೂ ನನ್ನ ಬರವಣಿಗೆಯ ಸೂಕ್ಷ್ಮ ವಿಮರ್ಶಕನಾಗಿರುವ 'ಅವಳ' ಗಂಡನಿಗೆ!
ನಾನು ಏನೇ ಬರೆದರೂ ಅದು ನಮ್ಮಿಬ್ಬರ ನಡುವೆ ನಡೆದ ಯಾವುದೇ ಘಟನೆಯನ್ನು ಪುನರಪಿ ನೆನಪಿಸಲೇ ಬಾರದು. ನೆನಪಿಸಿದರೂ ಅದು ಯಾರ ಜತೆಗೂ ನಡೆಯುವಂತದ್ದೆ ಎಂದು 'ಅವಳು' ಸಹಿತ ಎಲ್ಲರಿಗೂ ಅನಿಸಿ ಬಿಡಬೇಕು. ಅದರಲ್ಲಿ 'ವಿಶೇಷ' ಕಾಣಲೇಬಾರದು.
ನಾ ಬರೆಯುವ ಯಾವ ಪದವೂ ನಮ್ಮ 'ಗೌಪ್ಯ ಪದಕೋಶ'ದಲ್ಲಿದ್ದಿರಬಾರದು. ಅದರ ಬಗ್ಗೆ ನಮ್ಮ ಹತ್ತಿರವರಿಗೆ ಯಾವುದೇ 'ಕ್ಲೂ' ಸಿಗಲೇಬಾರದು. ನಾ ವರ್ಣಿಸುವ ಸ್ಥಳ, ಸನ್ನಿವೇಶ, ಭಾವನೆಗಳೆಲ್ಲವೂ ಅಪರಿಚಿತವೆನಿಸಬೇಕು. ಇಲ್ಲ, ತೀರಾ ಪರಿಚಿತವೆಂದೆನಿಸಿ ಅದು 'ಸಾಮಾನ್ಯೀಕರಣ'ಕ್ಕೊಳಗಾಗಬೇಕು. ಅದರಲ್ಲಿ ನನ್ನ ಅವಳ ಪ್ರೀತಿ, ಒಡನಾಟ, ಮತ್ತೊಂದಿಷ್ಟು ಕಣ್ಣಾಮುಚ್ಚಾಲೆ ವ್ಯವಹಾರಗಳ ಚಿತ್ರಣ ಅವಳಲ್ಲಿ ಇವ 'ಇನ್ಯಾರನ್ನೋ ಇಟ್ಟು ಕೊಂಡಿದ್ನ' ಎಂಬ ಅನುಮಾನ ಮೂಡಿಸಬೇಕು.
ಅದೇ ನಮ್ಮ ಹತ್ತಿರದವರಿದ್ದಾರಲ್ಲ, ಅವರು ಅದ್ಯಾವ ಹುಡುಗಿ ಎಂದು ತಲೆ ಕೆರೆದುಕೊಂಡು, ಕುತೂಹಲದ ಹಿಮಾಲಯ ಏರಿ, ಕಾಲ್ ಮಾಡಿ ಅದ್ಯಾರು ಅಂತ ಹೇಳೋ ಪ್ಲೀಸ್... ಎಂದು ಗೋಗರೆಯಬೇಕು. ಹೇಳು ನಾವು ಯಾರಿಗೂ ಹೇಳುವುದಿಲ್ಲ ಎಂದು ಆಣೆಗಳ ಸುರಿಮಳೆ ಸುರಿಸಿ ನಂತರ ಆಧುನಿಕವಾಗಿ ಚಿಂತಿಸಿ ಬಾಂಡ್ ಪೇಪರ್ ಮೇಲೆ ಸಹಿ ಹಾಕೋ ಮಟ್ಟಕ್ಕೆ ಬರಬೇಕು, ನಮ್ಮ ಮೇಲೆ ನಿನಗೆ ನಂಬಿಕೆ ಇಲ್ವಾ? ಎಂದು ಅವರು ಕೇಳ ಬೇಕು. ಇನ್ನೂ ಹತ್ತಿರವರು ನನ್ನ ಕಾಲರ್ ಹಿಡಿದು ಕೇಳುವ ಸ್ಥಿತಿಗೆ ಬರಬೇಕು. ಊಹೂಂ ಅದರು ಅವರಿಗೆ 'ಅವಳು' ಯಾರು ಎಂದು ಗೊತ್ತಾಗಲೇ ಬಾರದು.
ಬರವಣಿಗೆಯಲ್ಲಿನ ಯಾವುದೇ ಹೆಸರಿನ ಯಾವುದೇ ಪದ ಕೂಡ 'ಅವಳ' ಹೆಸರನ್ನು ಸೂಚಿಸಲೇಬಾರದು. ಒಂದು ಸತ್ಯ ಹೇಳಿದರೆ ಆ ಸತ್ಯವನ್ನು ಸುಳ್ಳು ಮಾಡುವ ನೂರು ಸುಳ್ಳು ಹೇಳಬೇಕು. ಅಥವಾ ನೂರು ಸತ್ಯ ಹೇಳಿ ಒಂದು 'ದೊಡ್ಡ' ಸುಳ್ಳು ಹೇಳಿದರೂ ಆಗುತ್ತದೆ.
ಅವಳ ರೂಪ, ಗುಣ, ಹಾವಭಾವಗಳೆಲ್ಲವನ್ನೂ ಗೊಂದಲ ಹುಟ್ಟಿಸುವಂತೆ ಹೇಳಬೇಕು. ಬೇಡ, ಅದು ಹೇಗೆ ಬರೆದರೂ ಅವಳಿಗೆ ಅದು 'ಅವಳೇ' ಎಂಬ ಅನುಮಾನ ಬಂದೇ ಬರುತ್ತದೆ. ಅವಳಿಗೆ ಬಾರದಿದ್ದರೂ ಅವಳ ಬಗ್ಗೆ ಮನಸಲ್ಲೇ ಮಂಡಿಗೆ ಮೆಲ್ಲುತ್ತಿದ್ದರಿಗಂತೂ ಬಂದೇ ಬರುತ್ತದೆ. ಇದರ ಸಹವಾಸವೇ ಬೇಡ. ಅವಳು ಬಳಸುತ್ತಿದ್ದ ವಸ್ತು, ಇಷ್ಟಪಡುವ ತಿಂಡಿ ತಿನಿಸು, ನಟ ನಟಿ, ಬಣ್ಣ ಹೀಗೆ ಇನ್ನೇನೋ ಗಳನ್ನು ರೂಪಕವಾಗಿ ಬಳಸೋಣ... ಅಂದರೆ ಅದು ಹೆಚ್ಚಿನವರಿಗೆ ಗೊತ್ತಿದೆ.
"ಇಲ್ಲಿನ ಎಲ್ಲ ಸನ್ನಿವೇಶ, ಪಾತ್ರ ಹಾಗೂ ಸಂಭಾಷಣೆಗಳು ಕೇವಲ ಕಾಲ್ಪನಿಕ. ಇದಕ್ಕೂ ನೈಜ ಘಟನೆಗಳಿಗೂ ಯಾವುದೇ ಸಂಬಂಧವಿದೆ ಎಂದೆನಿಸಿದರೆ ಅದು ಕೇವಲ ಕಾಕತಾಳೀಯ" ಎಂದು ಕಥೆಯ ಆರಂಭದಲ್ಲಿ ಬರೆದು ಬಿಟ್ಟರೇ...? ಆದರೆ ಈ ಸಾಲುಗಳು ನಂಬಿಕೆ ಹುಟ್ಟಿಸುವ ಸಾಮರ್ಥ್ಯ ಕಳೆದುಕೊಂಡು ತುಂಬ ಸಮಯವಾಗಿದೆ.
ಈಗೇನು ಮಾಡಲಿ? ನನಗೆ 'ಅದನ್ನು' ಬರೆಯಲೇ ಬೇಕು. ಆದರೆ ಅದರಲ್ಲಿರುವ 'ಅವಳನ್ನು' ಏನು ಮಾಡೋದು?
'ಅವಳ' ಕಥೆ ನನ್ನ ಮನದಲ್ಲಿ ಗರ್ಭಂಕುರವಾಗಿ ಕೆಲ ಸಮಯಗಳೇ ಸಾಗಿದೆ... ಅದನ್ನು ಗರ್ಭಪಾತ ಮಾಡಿಸಲು ನನಗೆ ಸುತಾರಾಂ ಇಷ್ಟವಿಲ್ಲ. ಅದು ನನ್ನ ಬರವಣಿಗೆಯ ಸೋಲು ಅಥವಾ ಅತ್ಮಹತ್ಯೆ. ಹಾಗೇ ಅಥವಾ ಹೀಗೆ ಜನ್ಮ ನೀಡಲು ಸಾಧ್ಯವಿಲ್ಲ, ಅದು ಅವಳ ಬದುಕಿನ ಪ್ರಶ್ನೆ... ಈಗ ತಾನೇ ಗಂಡನ ಮನೆ ಸೇರಿ ಆತನ ಬಿಸಿಯುಸಿರಿಗೆ ಕರಗುತ್ತಿರುವವಳು ನನ್ನ ಬಿಸಿಯುಸಿರಿಗೂ ಕರಗಿದ್ದಳು ಎಂದು 'ಅವನಿಗೆ' ಗೊತ್ತಾದರೆ ನಂತರ 'ಅವಳ' ಉಸಿರೆಲ್ಲ ಬಿಸಿಯೇ. ಆಕೆಯ ಆ ಬಿಸಿ ಉಸಿರಿನ ತಾಪಕ್ಕೆ ನನ್ನ ಬರವಣಿಗೆಯ ಸೆಲೆ ಬತ್ತಿ ಹೋಗಬಹುದು. ಅಲ್ಲಿಗೆ ನನ್ನ ಬರವಣಿಗೆಯ ಶವಸಂಸ್ಕಾರವೂ ನಡೆದು ಹೋಗುತ್ತದೆ! ಕಥೆಯಾಗಲೇ ಬೇಕಾದ ಹುಡುಗಿಯನ್ನು ಅದು ಹೇಗೆ ತಾನೇ ಕಥೆ ಮಾಡಲಿ?
Friday, August 7, 2009
ಕಾಲೇಜು ಚುನಾವಣೆ: ಕಾಸೇ ಬಾಸ್!
ಶಿಕ್ಷಣ ವ್ಯವಸ್ಥೆಗೂ ಆ ದೇಶದ ಆಡಳಿತ ಕ್ರಮಕ್ಕೂ ನೇರ ಸಂಬಂಧವಿದೆ. ಅದರಲ್ಲೂ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿ(ಬೆಳೆ)ಯುವಿಕೆಗೆ ಶಿಕ್ಷಣದ ಕೊಡುಗೆ ಅಪಾರ.ನಮ್ಮ ದೇಶದ ಮಕ್ಕಳಿಗೆ ಪ್ರಜಾಪ್ರಭುತ್ವ ಎಂದರೆ ಏನು ಎಂಬುದು ಆರ್ಥವಾಗುವುದೇ ಶಾಲಾ ಕಾಲೇಜುಗಳ ಮೂಲಕ. ಈ 'ಆರ್ಥವಾಗುವಿಕೆ' ಸೈಧಾಂತಿಕ ಮತ್ತು ಪ್ರಾಯೋಗಿಕ ಅನುಭವಗಳೆರಡನ್ನು ಹೊಂದಿರುತ್ತವೆ.
ಸೈಧಾಂತಿಕ ವಿಷಯಗಳನ್ನು ಪಠ್ಯಗಳ ಮೂಲಕ ತಿಳಿದುಕೊಳ್ಳವ ನಾವುಗಳು ಅದರ ಪ್ರಾಯೋಗಿಕ ಅನುಭವವನ್ನು ಶಾಲಾ ಕಾಲೇಜು ಚುನಾವಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪಡೆಯುತ್ತಿವೆ.
ಆಂದರೆ ಶಾಲಾ ಕಾಲೇಜು ಚುನಾವಣೆಗಳು ದೇಶದ ಭಾವಿ ಪ್ರಜೆಗಳಿಗೆ ಪ್ರಜಾಪ್ರಭುತ್ವದ ಮೊದಲ ಪಾಠಶಾಲೆ ಎಂದಾಯಿತು. ಇದನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಈ ಚುನಾವಣೆಗಳಲ್ಲಿ ನಾವು ಇಂದು ಕಾಣುವ ವಾತಾವರಣ ದೇಶದ ಮುಂದಿನ ಚುನಾವಣೆಗಳ ಪರಿಸರ ಯಾವ ರೀತಿ ಇರುತ್ತದೆ ಎಂಬುದರ ಸ್ಪಷ್ಟ ಮುನ್ಸೂಚಣೆ. ಹಾಗಾದರೆ 'ಡೆಮೋಕ್ರಸಿ ಇಸ್ ಇನ್ ಡೇಂಜರ್'!
ಕಾಲೇಜಿನ ವಿದ್ಯಾರ್ಥಿ ಸಂಘಗಳಿಗೆ ನಡೆಯುವ ಚುನಾವಣೆಗಳು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಳಿಗೆ 'ಎಲ್ಲಾ' ರೀತಿಯಿಂದಲೂ ಪೈಪೋಟಿ ನೀಡುತ್ತಿದೆ. ಸದನದಲ್ಲೊಂದು ಸ್ಥಾನ ಪಡೆಯಲು ಒಬ್ಬ ಅಭ್ಯರ್ಥಿ ಏನೆಲ್ಲಾ ಕಸರತ್ತು ಮಾಡುತ್ತಾನೋ ಅದೆಲ್ಲವನ್ನು ಒಂದು ವರ್ಷದ ಆವಧಿಗೆ ಒಂದು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಲು ವಿಧ್ಯಾರ್ಥಿಯೊಬ್ಬ ಮಾಡುತ್ತಾನೆ ಎಂದರೆ ನೀವು ನಂಬಲೇ ಬೇಕು.
ಚುನಾವಣೆ ಅಂದಾಗ ಪೈಪೋಟಿ ಇದ್ದೆ ಇರುತ್ತದೆ. ರಾಜಕೀಯ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲಿ ಹೆಸರಿಗಾದರೂ ಅಧಿಕಾರಕ್ಕಾಗಿ 'ತತ್ವ ಸಿದ್ದಾಂತಗಳ ನಡುವಿನ ಸೆಣಸಾಟ' ಎಂಬ ಪರಿಕಲ್ಪನೆ ಇದೆ. ಈ ಸೆಣಸಾಟವನ್ನು ವ್ಯವಸ್ಥಿತವಾಗಿ ಮತ್ತು ಕಾನೂನು ಬದ್ಧವಾಗಿ ನಡೆಸಲು ಚುನಾವಣ ಆಯೋಗ ಎಂಬ ಒಂದು ಸಂಸ್ಠೆಯೇ ಇದೆ. ಹಾಗೆಯೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವವರಿಗೆ ಶಿಕ್ಷೆಯ ಭಯ ಕೂಡವಿರುತ್ತದೆ. ಆದರೆ ಕಾಲೇಜುಗಳಲ್ಲಿ?
ಇಂದು ಕಾಲೇಜು ಚುನಾವಣೆ ಗೆಲ್ಲಲ್ಲು ವಿದ್ಯಾರ್ಥಿಗಳು ಲಕ್ಷಗಟ್ಟಲೆ ಹಣ ಸುರಿಯುತ್ತಾನೆ. ನನಗೆ ಗೊತ್ತಿರುವಂತೆ, ಕಳೆದ ವರ್ಷ ಒಂದು ಗ್ರಾಮೀಣ ಕಾಲೇಜಿನ ವಿದ್ಯಾರ್ಥಿ ಚುನಾವಣೆ ಗೆಲ್ಲಲ್ಲು ಸುರಿದದ್ದು ಬರೋಬ್ಬರಿ 75,000 ರೂಪಾಯಿಗಳು!
ಇದರರ್ಥ, ಹಿಂದೆ ಕಾಲೇಜು ಚುನಾವಣೆಗಳು ಮಾದರಿಯಾಗಿ ನಡೆಯುತ್ತಿತ್ತು, ಒಳ್ಳೆಯವರು ಮಾತ್ರ ಚುನಾವಣೆಗೆ ನಿಲ್ಲುತ್ತಿದ್ದರು ಮತ್ತು ಗೆಲ್ಲುತ್ತಿದ್ದರು ಎಂದಲ್ಲ. ಆದರೆ ಈಗಿನ ಕಾಲೇಜು ಚುನಾವಣೆಗಳಷ್ಟು ಅಧಃಪತನಕ್ಕೀಡಾಗಿರಲಿಲ್ಲ.
ಕಾಲೇಜು ಚುನಾವಣೆಗಳು ಗಮ್ಮತ್ತಿನ ಮತ್ತು ಮೋಜು ಮಸ್ತಿ ಮಾಡುವ ಅವಕಾಶವೊದಗಿಸುತ್ತದೆ. ಇದನ್ನು ಎಲ್ಲರು ಅನುಭವಿಸಬೇಕು, ಅಸ್ವಾದಿಸಬೇಕು, ಖುಷಿಪಡಬೇಕು. ಆದರೆ ಇದು ಉತ್ತಮ ಚುನಾವಣ ಹವಾ ಇದ್ದಲ್ಲಿ ಮಾತ್ರ ಸಾಧ್ಯ.
ಇಂದು ಕಾಲೇಜು ಚುನಾವಣೆ ಪ್ರತಿಷ್ಟೆಯ ಸಂಕೇತವಾಗಿ ಬಿಟ್ಟಿದೆ. ಇಲ್ಲಿ ಎರಡು ರೀತಿಯ ಪ್ರತಿಷ್ಟೆಗಳು ಮುಖ್ಯವಾಗಿ ವರ್ತಿಸುತ್ತದೆ. ಅದೇ ವ್ಯಕ್ತಿ ಪ್ರತಿಷ್ಟೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಷ್ಟೆ. ಈ ಕಾರಣಕ್ಕಾಗಿಯೇ ಇಂದು ಕಾಲೇಜು ಚುನಾವಣೆಗಳು ಪೊಲೀಸ್ ಭದ್ರತೆಯಲ್ಲಿ ನಡೆಯುತ್ತಿರುವುದು.
ನಮ್ಮ ಸಂಘಟನೆಯ ಅಭ್ಯರ್ಥಿ ಗೆಲ್ಲಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಏನೆಲ್ಲಾ ಕಸರತ್ತು ಮಾಡುತ್ತವೆ. ಹಾಗೆಯೇ, 'ನಮ್ಮ ಮಕ್ಕಳು ಗೆಲ್ಲಬೇಕು' ಎಂದು ಪೋಷಕರು ಹಣ ಸುರಿಯುತ್ತಾರೆ. ಅದರೊಂದಿಗೆ ಕೆಲ ಸಂದರ್ಭಗಳಲ್ಲಿ ತಮ್ಮ ತಂದೆ ತಾಯಿಗಳ ಹೆಸರನ್ನು ಬಂಡವಾಳ ಮಾಡಿಕೊಂಡು ವಿದ್ಯಾರ್ಥಿಗಳು ಸಾಲ ಮಾಡಿ ಚುನಾವಣೆಗೆ ನಿಲ್ಲುವುದು ಇದೆ.
ಸಾಮಾನ್ಯವಾಗಿ ಚುನಾವಣೆಗೆ ನಿಲ್ಲುವ ಅಭ್ಯರ್ಥಿ ಒಂದು ವರ್ಷದಿಂದಲೇ ಆ ಸ್ಥಾನದ ಮೇಲೆ ಕಣ್ಣಿಟ್ಟಿರುತ್ತಾನೆ. ಅದಕ್ಕಾಗಿ ವ್ಯವಸ್ಥಿತವಾದ ಕಾರ್ಯಾಚರಣೆ ಮಾಡುತ್ತಾನೆ. ತನ್ನ ಸುತ್ತ 'ಸಮಾನ ಮನಸ್ಕ' ವಿದ್ಯಾರ್ಥಿಗಳ ಪಟಾಲಾಂ ಕಟ್ಟಿಕೊಳ್ಳುತ್ತಾನೆ. ಇದು ಒಂಥರ ಭಟ್ಟಂಗಿಗಳ ಪಡೆ.
ಇನ್ನು ತರಗತಿ ಪ್ರತಿನಿಧಿಗಳ ಅಧ್ಯಕ್ಷನನ್ನು ಆಯ್ಕೆ ಮಾಡುವ ಕಾಲೇಜುಗಳಲ್ಲಿ ಆತ ತನನ್ನು ಬೆಂಬಲಿಸುವ ವಿದ್ಯಾರ್ಥಿಗಳು ಚುನಾವಣೆಗೆ ನಿಲ್ಲುವಂತೆ ನೋಡಿಕೊಳ್ಳುತ್ತಾನೆ. ಇದರಲ್ಲಿ ತಪ್ಪೇನಿಲ್ಲ, ಆದರೆ ಅವರ ಗೆಲುವಿನ ಸಂಪೂರ್ಣ 'ಜವಾಬ್ದಾರಿ' ತಾನೇ ಹೊರುತ್ತಾನೆ. ಇಲ್ಲೇ ಹಣದ ಚಲಾವಣೆ ಮೇರೆ ಮೀರುವುದು. ಇಲ್ಲ, ಗೆಲ್ಲುವ ಸಾಧ್ಯತೆ ಇರುವ ಅಭ್ಯರ್ಥಿಯನ್ನು ಕೊಂಡುಕೊಳ್ಳುತ್ತಾನೆ. ಒಂದು ವೇಳೆ ತನ್ನ ವಿರೋಧಿ ಪಾಳೆಯದಲ್ಲಿ ಗುರುತಿಸಿಕೊಂಡಿರುವ ವಿದ್ಯಾರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದಾದರೆ ಅವನನ್ನು ಬೆಂಬಲಿಸುವವರನ್ನು ತೃಪ್ತಿ ಪಡಿಸುವ ಕೆಲಸಕ್ಕೆ ಕೈ ಹಾಕುತ್ತಾನೆ. ಇನ್ನು ನೇರ ಚುನಾವಣೆ ನಡೆಯುವ ಕಾಲೇಜುಗಳಲ್ಲಿ ಅಭ್ಯರ್ಥಿಗೆ 'ರಿಸ್ಕ್' ಹೆಚ್ಚಿರುತ್ತದೆ. ಅಂದರೆ 'ಮಾನವ ಸಂಪನ್ಮೂಲ' ಮತ್ತು ಹಣದ ಹೂಡಿಕೆ ಹೆಚ್ಚು ಬೇಕಾಗುತ್ತದೆ. ಅದರೊಂದಿಗೆ ಪ್ರತಿಫಲದ ಗ್ಯಾರಂಟಿ ಇರುವುದಿಲ್ಲ. ಚುನಾವಣೆಯಲ್ಲಿ ಸೋತರೆ ಯಾರ ಕಾಲರ್ ಹಿಡಿಯುವುದು? ಎಂಬ ಸ್ಥಿತಿ. ಅದರೂ ಇಲ್ಲೂ ಹಣ, ಮದಿರೆ, ಪಾರ್ಟಿ ಯಥೇಚ್ಚವಾಗಿ ನಡೆಯುತ್ತದೆ. ಇಲ್ಲಿ ಕೆಲವು 'ಒಪಿನಿಯನ್ ಲೀಡರ್'ಗಳಿಗೆ ವಿಶೇಷ ಮನ್ನಣೆ.
ಅನಂತರ ಚುನಾವಣೆ... ಕಾಲೇಜುಗಳ ಆಡಳಿತ ಮಂಡಳಿ ನಮ್ಮದು ಬಹಳ ವ್ಯವಸ್ಥಿತವಾಗಿ, ಶಿಸ್ತುಬದ್ದವಾಗಿ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ನಡೆಯುವ ಚುನಾವಣೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತವೆ. ಯಾಕೆಂದರೆ ಅವರಿಗೆ ಚುನಾವಣೆ ಶಾಂತಿಯುತವಾಗಿ ನಡೆದರೆ ಸಾಕು. ಉಳಿದ ವಿಷಯಗಳು ಹೇಗಾದರೂ ಪರವಾಗಿಲ್ಲ. ಮತ್ತೇ ಕೆಲ ಸಂದರ್ಭಗಳಲ್ಲಿ ಅವರಿಗೆ ಈ 'ಭೂಗತ ಚಟುವಟಿಕೆ'ಯ ಅರಿವೇ ಇರುವುದಿಲ್ಲ.
ಇವುಗಳ ಒಟ್ಟು ಫಲವಾಗಿ ಬಡ ವಿದ್ಯಾರ್ಥಿಯೊಬ್ಬ ಚುನಾವಣೆಗೆ ನಿಲ್ಲುವಂತಿಲ್ಲ, ನಿಂತು ಗೆಲ್ಲಬೇಕಾದರೆ ಅವನಿಗೆ ಯಾರದದ್ದರೂ ಆರ್ಥಿಕ ಅಥವಾ ಸಂಘಟನೆಗಳ ಬೆಂಬಲ ಬೇಕೇ ಬೇಕು. ಅದರೊಂದಿಗೆ 'ಸಕಲ ಕಲಾ ವಲ್ಲಭ'ರಾಗಿರಬೇಕು. ಇದೇ ನಾಯಕತ್ವ ಗುಣ! ಹಾಗಂತ, ಕಾಲೇಜು ಚುನಾವಣೆ ನಡೆಸದೇ, ಅಂಕದ ಅಧಾರದ ಮೇಲೆ ಅಥವಾ ಇನ್ನೀತರ ಮಾನದಂಡಗಳ ಮೂಲಕ ವಿದ್ಯಾರ್ಥಿ ಪ್ರತಿನಿಧಿಗಳನ್ನು ಆರಿಸುವುದು ಆಕ್ಷಮ್ಯ.ವಿದ್ಯಾರ್ಥಿ ಸಂಘದ ನಾಯಕ ಸ್ಥಾನಕ್ಕೆ ಚುನಾವಣೆಗಳ ಮೂಲಕವೇ ಆಯ್ಕೆ ನಡೆಯಬೇಕು. ಆದರೆ ಈ ಆಯ್ಕೆ ಪ್ರಕ್ರಿಯೆಯಲ್ಲಿ ಬದಲಾವಣೆಯಾಗಬೇಕು. ಯಾವುದೇ ವಿದ್ಯಾರ್ಥಿ ಅನೈತಿಕ ಮಾರ್ಗದಲ್ಲಿ ಚುನಾವಣೆ ಎದುರಿಸುತ್ತಿದ್ದಾನೆ ಅಥವಾ ಎದುರಿಸಿದ್ದಾನೆ ಎಂಬುದು ಸಾಬೀತಾದರೆ ಅವನ ಅಭ್ಯರ್ಥಿತನವನ್ನು ಅನೂರ್ಜಿತಗೊಳಿಸಬೇಕು.
ಕಾಲೇಜು ಚುನಾವಣೆ ಗೆಲ್ಲಲ್ಲು ಹಣ ಚೆಲ್ಲಿದ್ದೇ ಆದರೆ ಅಥವಾ ಆ ಅಭ್ಯರ್ಥಿಯ ಪರವಾಗಿ ಬೇರೆ ಯಾರದರೂ ಆ ಕೆಲಸ ಮಾಡಿದರೆ ಆ ವಿದ್ಯಾರ್ಥಿಯ ನಾಮಪತ್ರ ತಿರಸ್ಕರಿಸಬೇಕು, ಚುನಾವಣೆ ಬಳಿಕ ಈ ವರ್ತನೆ ಕಂಡರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು.
ಅಭ್ಯರ್ಥಿಗಳಿಗೆ ಪ್ರಚಾರ ನಡೆಸಲು ಒಂದು ನೀತಿ ಸಂಹಿತೆ ರಚಿಸಿಡಬೇಕು, ಆ ಪ್ರಕಾರವೇ ಅವರು ಪ್ರಚಾರ ನಡೆಸಬೇಕು.
ಕಾಲೇಜು ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ನಡೆಸುವ ಮೆರವಣಿಗೆ ಮತ್ತು ಸುಡುಮದ್ದು ಪ್ರದರ್ಶನಗಳಿಗೆ ಸಂಪೂರ್ಣ ನಿಷೇಧ ಹೇರಬೇಕು.
ಈ ಬಗ್ಗೆ ಕಾಲೇಜುಗಳ ಅಡಳಿತ ಮಂಡಳಿ ಮತ್ತು ಸರಕಾರ ಗಂಭೀರವಾಗಿ ಯೋಚಿಸಬೇಕು. ಕಾಲೇಜು ಚುನಾವಣೆಗಳನ್ನು ನಡೆಸುವ ಜವಾಬ್ಧಾರಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕು ಅಥವಾ ಕಾಲೇಜುಗಳು ಇಡೀ ಚುನಾವಣ ಪ್ರಕಿಯೆಯ ಮೇಲೆಯೇ ನಿಗಾವಿಡುವ ಕೆಲಸ ಮಾಡಬೇಕು.
ಯಾಕೆಂದರೆ ಪ್ರಜಾಪ್ರಭುತ್ವದ ಯಶಸ್ಸಿನ ನಿರೀಕ್ಷೆಗಳು ಹುಟ್ಟ ಬೇಕಾದ ಜಾಗದಲ್ಲೇ ಭ್ರಮನಿರಶನವಾದರೆ ಪ್ರಜಾಪ್ರಭುತ್ವದ ಆಯುಷ್ಯಕ್ಕೆ ಗೆದ್ದಲು ಹಿಡಿದಂತೆ. (ವಿಜಯ ಕರ್ನಾಟಕದಲ್ಲಿ ಪ್ರಕಟಿತ ಲೇಖನ)
ಸೈಧಾಂತಿಕ ವಿಷಯಗಳನ್ನು ಪಠ್ಯಗಳ ಮೂಲಕ ತಿಳಿದುಕೊಳ್ಳವ ನಾವುಗಳು ಅದರ ಪ್ರಾಯೋಗಿಕ ಅನುಭವವನ್ನು ಶಾಲಾ ಕಾಲೇಜು ಚುನಾವಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪಡೆಯುತ್ತಿವೆ.
ಆಂದರೆ ಶಾಲಾ ಕಾಲೇಜು ಚುನಾವಣೆಗಳು ದೇಶದ ಭಾವಿ ಪ್ರಜೆಗಳಿಗೆ ಪ್ರಜಾಪ್ರಭುತ್ವದ ಮೊದಲ ಪಾಠಶಾಲೆ ಎಂದಾಯಿತು. ಇದನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಈ ಚುನಾವಣೆಗಳಲ್ಲಿ ನಾವು ಇಂದು ಕಾಣುವ ವಾತಾವರಣ ದೇಶದ ಮುಂದಿನ ಚುನಾವಣೆಗಳ ಪರಿಸರ ಯಾವ ರೀತಿ ಇರುತ್ತದೆ ಎಂಬುದರ ಸ್ಪಷ್ಟ ಮುನ್ಸೂಚಣೆ. ಹಾಗಾದರೆ 'ಡೆಮೋಕ್ರಸಿ ಇಸ್ ಇನ್ ಡೇಂಜರ್'!
ಕಾಲೇಜಿನ ವಿದ್ಯಾರ್ಥಿ ಸಂಘಗಳಿಗೆ ನಡೆಯುವ ಚುನಾವಣೆಗಳು ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗಳಿಗೆ 'ಎಲ್ಲಾ' ರೀತಿಯಿಂದಲೂ ಪೈಪೋಟಿ ನೀಡುತ್ತಿದೆ. ಸದನದಲ್ಲೊಂದು ಸ್ಥಾನ ಪಡೆಯಲು ಒಬ್ಬ ಅಭ್ಯರ್ಥಿ ಏನೆಲ್ಲಾ ಕಸರತ್ತು ಮಾಡುತ್ತಾನೋ ಅದೆಲ್ಲವನ್ನು ಒಂದು ವರ್ಷದ ಆವಧಿಗೆ ಒಂದು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಲು ವಿಧ್ಯಾರ್ಥಿಯೊಬ್ಬ ಮಾಡುತ್ತಾನೆ ಎಂದರೆ ನೀವು ನಂಬಲೇ ಬೇಕು.
ಚುನಾವಣೆ ಅಂದಾಗ ಪೈಪೋಟಿ ಇದ್ದೆ ಇರುತ್ತದೆ. ರಾಜಕೀಯ ಪಕ್ಷಗಳ ನಡುವೆ ನಡೆಯುವ ಚುನಾವಣೆಯಲ್ಲಿ ಹೆಸರಿಗಾದರೂ ಅಧಿಕಾರಕ್ಕಾಗಿ 'ತತ್ವ ಸಿದ್ದಾಂತಗಳ ನಡುವಿನ ಸೆಣಸಾಟ' ಎಂಬ ಪರಿಕಲ್ಪನೆ ಇದೆ. ಈ ಸೆಣಸಾಟವನ್ನು ವ್ಯವಸ್ಥಿತವಾಗಿ ಮತ್ತು ಕಾನೂನು ಬದ್ಧವಾಗಿ ನಡೆಸಲು ಚುನಾವಣ ಆಯೋಗ ಎಂಬ ಒಂದು ಸಂಸ್ಠೆಯೇ ಇದೆ. ಹಾಗೆಯೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವವರಿಗೆ ಶಿಕ್ಷೆಯ ಭಯ ಕೂಡವಿರುತ್ತದೆ. ಆದರೆ ಕಾಲೇಜುಗಳಲ್ಲಿ?
ಇಂದು ಕಾಲೇಜು ಚುನಾವಣೆ ಗೆಲ್ಲಲ್ಲು ವಿದ್ಯಾರ್ಥಿಗಳು ಲಕ್ಷಗಟ್ಟಲೆ ಹಣ ಸುರಿಯುತ್ತಾನೆ. ನನಗೆ ಗೊತ್ತಿರುವಂತೆ, ಕಳೆದ ವರ್ಷ ಒಂದು ಗ್ರಾಮೀಣ ಕಾಲೇಜಿನ ವಿದ್ಯಾರ್ಥಿ ಚುನಾವಣೆ ಗೆಲ್ಲಲ್ಲು ಸುರಿದದ್ದು ಬರೋಬ್ಬರಿ 75,000 ರೂಪಾಯಿಗಳು!
ಇದರರ್ಥ, ಹಿಂದೆ ಕಾಲೇಜು ಚುನಾವಣೆಗಳು ಮಾದರಿಯಾಗಿ ನಡೆಯುತ್ತಿತ್ತು, ಒಳ್ಳೆಯವರು ಮಾತ್ರ ಚುನಾವಣೆಗೆ ನಿಲ್ಲುತ್ತಿದ್ದರು ಮತ್ತು ಗೆಲ್ಲುತ್ತಿದ್ದರು ಎಂದಲ್ಲ. ಆದರೆ ಈಗಿನ ಕಾಲೇಜು ಚುನಾವಣೆಗಳಷ್ಟು ಅಧಃಪತನಕ್ಕೀಡಾಗಿರಲಿಲ್ಲ.
ಕಾಲೇಜು ಚುನಾವಣೆಗಳು ಗಮ್ಮತ್ತಿನ ಮತ್ತು ಮೋಜು ಮಸ್ತಿ ಮಾಡುವ ಅವಕಾಶವೊದಗಿಸುತ್ತದೆ. ಇದನ್ನು ಎಲ್ಲರು ಅನುಭವಿಸಬೇಕು, ಅಸ್ವಾದಿಸಬೇಕು, ಖುಷಿಪಡಬೇಕು. ಆದರೆ ಇದು ಉತ್ತಮ ಚುನಾವಣ ಹವಾ ಇದ್ದಲ್ಲಿ ಮಾತ್ರ ಸಾಧ್ಯ.
ಇಂದು ಕಾಲೇಜು ಚುನಾವಣೆ ಪ್ರತಿಷ್ಟೆಯ ಸಂಕೇತವಾಗಿ ಬಿಟ್ಟಿದೆ. ಇಲ್ಲಿ ಎರಡು ರೀತಿಯ ಪ್ರತಿಷ್ಟೆಗಳು ಮುಖ್ಯವಾಗಿ ವರ್ತಿಸುತ್ತದೆ. ಅದೇ ವ್ಯಕ್ತಿ ಪ್ರತಿಷ್ಟೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಷ್ಟೆ. ಈ ಕಾರಣಕ್ಕಾಗಿಯೇ ಇಂದು ಕಾಲೇಜು ಚುನಾವಣೆಗಳು ಪೊಲೀಸ್ ಭದ್ರತೆಯಲ್ಲಿ ನಡೆಯುತ್ತಿರುವುದು.
ನಮ್ಮ ಸಂಘಟನೆಯ ಅಭ್ಯರ್ಥಿ ಗೆಲ್ಲಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಏನೆಲ್ಲಾ ಕಸರತ್ತು ಮಾಡುತ್ತವೆ. ಹಾಗೆಯೇ, 'ನಮ್ಮ ಮಕ್ಕಳು ಗೆಲ್ಲಬೇಕು' ಎಂದು ಪೋಷಕರು ಹಣ ಸುರಿಯುತ್ತಾರೆ. ಅದರೊಂದಿಗೆ ಕೆಲ ಸಂದರ್ಭಗಳಲ್ಲಿ ತಮ್ಮ ತಂದೆ ತಾಯಿಗಳ ಹೆಸರನ್ನು ಬಂಡವಾಳ ಮಾಡಿಕೊಂಡು ವಿದ್ಯಾರ್ಥಿಗಳು ಸಾಲ ಮಾಡಿ ಚುನಾವಣೆಗೆ ನಿಲ್ಲುವುದು ಇದೆ.
ಸಾಮಾನ್ಯವಾಗಿ ಚುನಾವಣೆಗೆ ನಿಲ್ಲುವ ಅಭ್ಯರ್ಥಿ ಒಂದು ವರ್ಷದಿಂದಲೇ ಆ ಸ್ಥಾನದ ಮೇಲೆ ಕಣ್ಣಿಟ್ಟಿರುತ್ತಾನೆ. ಅದಕ್ಕಾಗಿ ವ್ಯವಸ್ಥಿತವಾದ ಕಾರ್ಯಾಚರಣೆ ಮಾಡುತ್ತಾನೆ. ತನ್ನ ಸುತ್ತ 'ಸಮಾನ ಮನಸ್ಕ' ವಿದ್ಯಾರ್ಥಿಗಳ ಪಟಾಲಾಂ ಕಟ್ಟಿಕೊಳ್ಳುತ್ತಾನೆ. ಇದು ಒಂಥರ ಭಟ್ಟಂಗಿಗಳ ಪಡೆ.
ಇನ್ನು ತರಗತಿ ಪ್ರತಿನಿಧಿಗಳ ಅಧ್ಯಕ್ಷನನ್ನು ಆಯ್ಕೆ ಮಾಡುವ ಕಾಲೇಜುಗಳಲ್ಲಿ ಆತ ತನನ್ನು ಬೆಂಬಲಿಸುವ ವಿದ್ಯಾರ್ಥಿಗಳು ಚುನಾವಣೆಗೆ ನಿಲ್ಲುವಂತೆ ನೋಡಿಕೊಳ್ಳುತ್ತಾನೆ. ಇದರಲ್ಲಿ ತಪ್ಪೇನಿಲ್ಲ, ಆದರೆ ಅವರ ಗೆಲುವಿನ ಸಂಪೂರ್ಣ 'ಜವಾಬ್ದಾರಿ' ತಾನೇ ಹೊರುತ್ತಾನೆ. ಇಲ್ಲೇ ಹಣದ ಚಲಾವಣೆ ಮೇರೆ ಮೀರುವುದು. ಇಲ್ಲ, ಗೆಲ್ಲುವ ಸಾಧ್ಯತೆ ಇರುವ ಅಭ್ಯರ್ಥಿಯನ್ನು ಕೊಂಡುಕೊಳ್ಳುತ್ತಾನೆ. ಒಂದು ವೇಳೆ ತನ್ನ ವಿರೋಧಿ ಪಾಳೆಯದಲ್ಲಿ ಗುರುತಿಸಿಕೊಂಡಿರುವ ವಿದ್ಯಾರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದಾದರೆ ಅವನನ್ನು ಬೆಂಬಲಿಸುವವರನ್ನು ತೃಪ್ತಿ ಪಡಿಸುವ ಕೆಲಸಕ್ಕೆ ಕೈ ಹಾಕುತ್ತಾನೆ. ಇನ್ನು ನೇರ ಚುನಾವಣೆ ನಡೆಯುವ ಕಾಲೇಜುಗಳಲ್ಲಿ ಅಭ್ಯರ್ಥಿಗೆ 'ರಿಸ್ಕ್' ಹೆಚ್ಚಿರುತ್ತದೆ. ಅಂದರೆ 'ಮಾನವ ಸಂಪನ್ಮೂಲ' ಮತ್ತು ಹಣದ ಹೂಡಿಕೆ ಹೆಚ್ಚು ಬೇಕಾಗುತ್ತದೆ. ಅದರೊಂದಿಗೆ ಪ್ರತಿಫಲದ ಗ್ಯಾರಂಟಿ ಇರುವುದಿಲ್ಲ. ಚುನಾವಣೆಯಲ್ಲಿ ಸೋತರೆ ಯಾರ ಕಾಲರ್ ಹಿಡಿಯುವುದು? ಎಂಬ ಸ್ಥಿತಿ. ಅದರೂ ಇಲ್ಲೂ ಹಣ, ಮದಿರೆ, ಪಾರ್ಟಿ ಯಥೇಚ್ಚವಾಗಿ ನಡೆಯುತ್ತದೆ. ಇಲ್ಲಿ ಕೆಲವು 'ಒಪಿನಿಯನ್ ಲೀಡರ್'ಗಳಿಗೆ ವಿಶೇಷ ಮನ್ನಣೆ.
ಅನಂತರ ಚುನಾವಣೆ... ಕಾಲೇಜುಗಳ ಆಡಳಿತ ಮಂಡಳಿ ನಮ್ಮದು ಬಹಳ ವ್ಯವಸ್ಥಿತವಾಗಿ, ಶಿಸ್ತುಬದ್ದವಾಗಿ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ನಡೆಯುವ ಚುನಾವಣೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತವೆ. ಯಾಕೆಂದರೆ ಅವರಿಗೆ ಚುನಾವಣೆ ಶಾಂತಿಯುತವಾಗಿ ನಡೆದರೆ ಸಾಕು. ಉಳಿದ ವಿಷಯಗಳು ಹೇಗಾದರೂ ಪರವಾಗಿಲ್ಲ. ಮತ್ತೇ ಕೆಲ ಸಂದರ್ಭಗಳಲ್ಲಿ ಅವರಿಗೆ ಈ 'ಭೂಗತ ಚಟುವಟಿಕೆ'ಯ ಅರಿವೇ ಇರುವುದಿಲ್ಲ.
ಇವುಗಳ ಒಟ್ಟು ಫಲವಾಗಿ ಬಡ ವಿದ್ಯಾರ್ಥಿಯೊಬ್ಬ ಚುನಾವಣೆಗೆ ನಿಲ್ಲುವಂತಿಲ್ಲ, ನಿಂತು ಗೆಲ್ಲಬೇಕಾದರೆ ಅವನಿಗೆ ಯಾರದದ್ದರೂ ಆರ್ಥಿಕ ಅಥವಾ ಸಂಘಟನೆಗಳ ಬೆಂಬಲ ಬೇಕೇ ಬೇಕು. ಅದರೊಂದಿಗೆ 'ಸಕಲ ಕಲಾ ವಲ್ಲಭ'ರಾಗಿರಬೇಕು. ಇದೇ ನಾಯಕತ್ವ ಗುಣ! ಹಾಗಂತ, ಕಾಲೇಜು ಚುನಾವಣೆ ನಡೆಸದೇ, ಅಂಕದ ಅಧಾರದ ಮೇಲೆ ಅಥವಾ ಇನ್ನೀತರ ಮಾನದಂಡಗಳ ಮೂಲಕ ವಿದ್ಯಾರ್ಥಿ ಪ್ರತಿನಿಧಿಗಳನ್ನು ಆರಿಸುವುದು ಆಕ್ಷಮ್ಯ.ವಿದ್ಯಾರ್ಥಿ ಸಂಘದ ನಾಯಕ ಸ್ಥಾನಕ್ಕೆ ಚುನಾವಣೆಗಳ ಮೂಲಕವೇ ಆಯ್ಕೆ ನಡೆಯಬೇಕು. ಆದರೆ ಈ ಆಯ್ಕೆ ಪ್ರಕ್ರಿಯೆಯಲ್ಲಿ ಬದಲಾವಣೆಯಾಗಬೇಕು. ಯಾವುದೇ ವಿದ್ಯಾರ್ಥಿ ಅನೈತಿಕ ಮಾರ್ಗದಲ್ಲಿ ಚುನಾವಣೆ ಎದುರಿಸುತ್ತಿದ್ದಾನೆ ಅಥವಾ ಎದುರಿಸಿದ್ದಾನೆ ಎಂಬುದು ಸಾಬೀತಾದರೆ ಅವನ ಅಭ್ಯರ್ಥಿತನವನ್ನು ಅನೂರ್ಜಿತಗೊಳಿಸಬೇಕು.
ಕಾಲೇಜು ಚುನಾವಣೆ ಗೆಲ್ಲಲ್ಲು ಹಣ ಚೆಲ್ಲಿದ್ದೇ ಆದರೆ ಅಥವಾ ಆ ಅಭ್ಯರ್ಥಿಯ ಪರವಾಗಿ ಬೇರೆ ಯಾರದರೂ ಆ ಕೆಲಸ ಮಾಡಿದರೆ ಆ ವಿದ್ಯಾರ್ಥಿಯ ನಾಮಪತ್ರ ತಿರಸ್ಕರಿಸಬೇಕು, ಚುನಾವಣೆ ಬಳಿಕ ಈ ವರ್ತನೆ ಕಂಡರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು.
ಅಭ್ಯರ್ಥಿಗಳಿಗೆ ಪ್ರಚಾರ ನಡೆಸಲು ಒಂದು ನೀತಿ ಸಂಹಿತೆ ರಚಿಸಿಡಬೇಕು, ಆ ಪ್ರಕಾರವೇ ಅವರು ಪ್ರಚಾರ ನಡೆಸಬೇಕು.
ಕಾಲೇಜು ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ನಡೆಸುವ ಮೆರವಣಿಗೆ ಮತ್ತು ಸುಡುಮದ್ದು ಪ್ರದರ್ಶನಗಳಿಗೆ ಸಂಪೂರ್ಣ ನಿಷೇಧ ಹೇರಬೇಕು.
ಈ ಬಗ್ಗೆ ಕಾಲೇಜುಗಳ ಅಡಳಿತ ಮಂಡಳಿ ಮತ್ತು ಸರಕಾರ ಗಂಭೀರವಾಗಿ ಯೋಚಿಸಬೇಕು. ಕಾಲೇಜು ಚುನಾವಣೆಗಳನ್ನು ನಡೆಸುವ ಜವಾಬ್ಧಾರಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕು ಅಥವಾ ಕಾಲೇಜುಗಳು ಇಡೀ ಚುನಾವಣ ಪ್ರಕಿಯೆಯ ಮೇಲೆಯೇ ನಿಗಾವಿಡುವ ಕೆಲಸ ಮಾಡಬೇಕು.
ಯಾಕೆಂದರೆ ಪ್ರಜಾಪ್ರಭುತ್ವದ ಯಶಸ್ಸಿನ ನಿರೀಕ್ಷೆಗಳು ಹುಟ್ಟ ಬೇಕಾದ ಜಾಗದಲ್ಲೇ ಭ್ರಮನಿರಶನವಾದರೆ ಪ್ರಜಾಪ್ರಭುತ್ವದ ಆಯುಷ್ಯಕ್ಕೆ ಗೆದ್ದಲು ಹಿಡಿದಂತೆ. (ವಿಜಯ ಕರ್ನಾಟಕದಲ್ಲಿ ಪ್ರಕಟಿತ ಲೇಖನ)
Thursday, July 23, 2009
ಆ ಸ್ವಾತಂತ್ರ್ಯ ಉಳಿಸಿಕೊಟ್ಟವರನ್ನು ಕೂಡ ನೆನಪಿಸಿಕೊಳ್ಳವುದು ಮುಖ್ಯವಲ್ಲವೇ?
ಅವರು ಬೇರೆಯವರಿಗಾಗಿ ಮರಣವನ್ನಪ್ಪಿದ್ದಲ್ಲ, ತಮ್ಮ ಸ್ವಂತಕ್ಕಂತೂ ಅಲ್ಲವೇ ಅಲ್ಲ. ಆದರೆ ಎಲ್ಲರಿಗಾಗಿ, ಅದರಲ್ಲೂ ನಮಗಾಗಿ! ಭಾರತೀಯರೆಂದು ಕರೆಸಿಕೊಳ್ಳುವ ನಮ್ಮೆಲ್ಲರಿಗಾಗಿ!ನಾವು ಪಾಕಿಸ್ತಾನದೊಂದಿಗೆ ಮೂರು ಯುದ್ಧ ಮಾಡಿದೇವು, ಮೂರರಲ್ಲೂ ಗೆದ್ದೆವು. ಚೀನಾದೊಂದಿಗೆ ನಡೆದ ಏಕಮಾತ್ರ ಸಮರದಲ್ಲಿ ಹೀನಾತಿಹೀನವಾಗಿ ಸೋತೆವು. ಚೀನಾ, ಜಮ್ಮು ಕಾಶ್ಮೀರದ ಮೇಲೆ ದಾಳಿ ನಡೆಸುತ್ತಿದ್ದಾಗ, 'ಅಲ್ಲಿ ಒಂದು ಹುಲ್ಲು ಕೂಡ ಬೆಳೆಯುವುದಿಲ್ಲ ಅದು ನಮಗ್ಯಾಕೆ? ಎಂದು ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರಶ್ನಿಸುತ್ತಾರೆ. ಆದಕ್ಕೆ ಆಗಿನ ಸಂಸದರೊಬ್ಬರು, 'ನಿಮ್ಮ ತಲೆಯಲ್ಲೂ ಕೂಡ ಒಂದೂ ಕೂದಲು ಬೆಳೆಯುವುದಿಲ್ಲ ಅದು ನಿಮಗ್ಯಾಕೆ'? ಎಂದು ಕೇಳುತ್ತಾರೆ. ನೆಹರೂ ಅ ಕ್ಷಣ ಪೆಚ್ಚಾಗುತ್ತಾರೆ. ಆದರೆ ನೆಹರುರಲ್ಲಿದ್ದ ಮನಸ್ಥಿತಿ ಮಾತ್ರ ಇಂದಿಗೂ ನಮ್ಮಿಂದ ದೂರವಾಗಿಲ್ಲ.
ತಾವಾಗಿ ಯಾರ ಮೇಲು ಯುದ್ಧ ಸಾರದ ಜಗತ್ತಿನ ಏಕೈಕ ದೇಶ ನಮ್ಮದು, ಅದೇ ರೀತಿ ಬ್ರಿಟಿಷರನ್ನು ಹೊರತುಪಡಿಸಿ ಬೇರೆ ಯಾವ ದಾಳಿಕೋರರ ಮೇಲೂ ಸಂಘಟಿತವಾಗಿ ಹೋರಾಡದವರು ಕೂಡ ನಾವೇ! ಆದರೆ ನಾವು ಸ್ವಾತಂತ್ರ್ಯಗಳಿಸಿದ ಬಳಿಕವೇ ನಾಲ್ಕು ಪ್ರಮುಖ ಯುದ್ಧಗಳನ್ನು ಎದುರಿಸಬೇಕಾಯಿತು. ಈ ನಾಲ್ಕು ಸಂದರ್ಭದಲ್ಲಿ ದೇಶಕ್ಕೆ ದೇಶವೇ ಒಂದಾಗಿತ್ತು.
ಈ ಎಲ್ಲ ಸಂದರ್ಭದಲ್ಲೂ ದೇಶದ ಸಾರ್ವಭೌಮತೆ ಉಳಿಸಿಕೊಟ್ಟದ್ದು ಮತ್ತು ಮುಂದೆಯೂ ಉಳಿಸಿಕೊಡುವುದು ನಮ್ಮ ಸೈನಿಕರೇ. ತೀರಾ ಇತ್ತೀಚಿಗೆ ನಡೆದ 1999ರ ಕಾರ್ಗಿಲ್ ಕದನ ಅಂದರೆ ಮಿಲಿಟರಿ ಭಾಷೆಯಲ್ಲಿ 'ಅಪರೇಷನ್ ವಿಜಯ' ಕಾರ್ಯಚರಣೆಯಲ್ಲಿ 533 ವೀರಯೋಧರನ್ನು ನಾವು ಕಳೆದುಕೊಂಡೆವು. ಆದರೆ ಇಂತಹ ಒಬ್ಬನೇ ಒಬ್ಬ ವೀರಯೋಧನ ಸಾಹಸಗಾಥೆಯ ಸಮಗ್ರ ಪರಿಚಯ ನಮ್ಮ ಪಾಠ ಪುಸ್ತಕಗಳ ಮೂಲಕ ನಮಗಾಗಿಲ್ಲ.
ಲೆಪ್ಟಿನೆಂಟ್ ಸೌರವ್ ಕಾಲಿಯಾ ತನ್ನ ಎಲ್. ಎಮ್. ಜಿ ಬಂದೂಕಿನಿಂದ 20 ಉಗ್ರರನ್ನು ಸದೆಬಡಿದ ಮೇಲೆಯೆ ತಾನು ಇತಿಹಾಸ ಪುಟ ಸೇರಿದ್ದು. ಹಾಗೇಯೇ ನಾಯ್ಕ್ ಅಂಗ್ರೇಜ್ ಸಿಂಗ್, ಎದೆಗೆ ಗುಂಡು ತಿಂದು ಅಸ್ಪತ್ರೆಯಲ್ಲಿ ಮಲಗಿದ್ದಾಗ, ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿಯಾಗುತ್ತಾರೆ. ಆಗ ಆಂಗ್ರೇಜ್ ಸಿಂಗ್, "ಸಾಬ್, ನಾವೆಲ್ಲ ಎದೆಗೆ ಗುಂಡು ತಿಂದಿದ್ದೇವೆ ಬೆನ್ನಿಗಲ್ಲ, ಅಂತ ಎಲ್ಲರಿಗೂ ಹೇಳಿ" ಅಂದಾಗ ಎಲ್ಲರ ಕಣ್ಣಾಲಿಗಳು ತುಂಬಿ ಬಂದವಂತೆ.
ಹೀಗೆ ಈ ಯುದ್ಧಗಳಲ್ಲಿ ಮಡಿದ, ದುಡಿದ ಪ್ರತಿಯೊಬ್ಬ ಸೈನಿಕನೂ ಒಂದೊಂದು ಪುಸ್ತಕವಾಗುವಷ್ಟು ಅನುಭವ ಹೊತ್ತುಕೊಂಡಿದ್ದಾರೆ. ಆದರೆ ಇಂತಹವರ ಬಗ್ಗೆ ನಮ್ಮ ಪಠ್ಯ ಪುಸ್ತಕಗಳಲ್ಲಿ ಎಲ್ಲದರೂ ಉಲ್ಲೇಖವಿದೇಯೇ? ಕೆಲವು ರಾಷ್ಟ್ರ ನಾಯಕರ ಕಥೆಗಳನ್ನು ಅಕ್ಷರ ಜೋಡಿಸಿ ಓದಲಾರಂಭಿಸಿದಂದಿನಿಂದ ನಾವು ಓದುತ್ತಿದ್ದೇವೆ. ಇದರಿಂದ ನಮ್ಮಲ್ಲಿ ಅಪರಿಮಿತ ದೇಶಪ್ರೇಮ ಬೆಳೆದಿದೆ ಎನ್ನುವಂತಿಲ್ಲ. ಯಾಕೆಂದರೆ ಅವರ ಹೋರಾಟ ಬೇರೊಂದು ದೇಶ ನಮ್ಮ ಮೇಲೆ ದಾಳಿ ನಡೆಸಿದಾಗ ಅಥವಾ ನಡೆಸುತ್ತಿರುವಾಗ ಪ್ರಯೋಜನಕ್ಕೆ ಬರುವುದಿಲ್ಲ. ಆದರೆ ಈಗ ಇರುವ ಸಂಭವ್ಯಯತೆಗಳು ಇಂತದ್ದೇ.
ಆಗ ನಮ್ಮ ಸಹಾಯಕ್ಕೇ ಬರುವುದು ನಮ್ಮ ಸೈನಿಕರ ಹೋರಾಟ. ಇಂದು ದೇಶಕ್ಕೆ ಬೇಕಾಗಿರುವುದು ಸೈನಿಕರ ಹಾದಿಯನ್ನು ತುಳಿಯಲು ಸಿದ್ದವಾಗಿರುವ ಮನಸ್ಸುಗಳು. ಇದರರ್ಥ, ಎಲ್ಲಕ್ಕೂ ರಕ್ತಪಾತವೇ ಮದ್ದು, ಅಥವಾ ಎಲ್ಲರೂ ಸೈನ್ಯ ಸೇರಬೇಕೆಂದೂ ಅಲ್ಲ ಆದರೆ ಆ ಬಗ್ಗೆ ಗೌರವ ಮತ್ತು ದೇಶಕ್ಕಾಗಿ ಹೋರಾಡುವ ಮತ್ತು ದುಡಿಯುವ ಆಯ್ಕೆಯನ್ನು ಮುಕ್ತವಾಗಿಟ್ಟು ಕೊಂಡವರು ಬೇಕು. ಅಂತಹವರು ಸೃಷ್ಟಿಯಾಗಬೇಕಾದರೆ ನಮ್ಮ ಪಠ್ಯಗಳು ಕೂಡ ಅದಕ್ಕೆ ಪೂರಕವಾಗಿರಬೇಕು.
ಆದರೆ ನಮ್ಮ ಪಠ್ಯ ಪುಸ್ತಕಗಳನ್ನು ಓದುವವನಲ್ಲಿ ಒಂದಿಷ್ಟು ದೇಶಪ್ರೇಮವಿದ್ದರೂ ಅದು ಬತ್ತಿ ಹೋಗಬಹುದು. ಅದು ಅಷ್ಟು ನಿಸ್ತೇಜ ಮತ್ತು ಚೈತನ್ಯ ಹೀನ ಒಟ್ಟಿನಲ್ಲಿ ಜಡ. ಅದು ಸೃಷ್ಟಿಸುತ್ತೀರುವ ಜನಾಂಗ ಕೂಡ ಅಂತದ್ದೇ!
ಪಾಠ ಪುಸ್ತಕಗಳಲ್ಲಿ ಭಾವನೆಗಳಿಗೆ ಹೆಚ್ಚು ಪ್ರಾಶಸ್ತ್ಯ ಇರಬಾರದು, ಒಪ್ಪಿಕೊಳ್ಳೋಣ. ಆದರೆ ಒಂದು ಸಮಾಜ ಪ್ರೇರಣೆ ಪಡೆಯುವ ಸಂಗತಿಗಳೇ ಇಲ್ಲ ಎಂದಾದರೇ ಅದು ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯುವಲ್ಲಿ ಸಹಕಾರಿ ಆಗಬಲ್ಲುದೇ? ಈ ಕೆಲಸ ಮಾಡದಿದ್ದ ಪಾಠ ಪುಸ್ತಕವಿದ್ದು ಪ್ರಯೋಜನವೇನು? ನಮ್ಮ ಸಮಾಜ ವಿಜ್ಞಾನ ಪುಸ್ತಕಗಳಿಗೆ ಕಾಣುವ ದೇಶಪ್ರೇಮವೆಂದರೆ ಸ್ವತಂತ್ರ ಹೋರಾಟಗಾರರದ್ದು ಮಾತ್ರ. ಇತಿಹಾಸದಲ್ಲಂತೂ ರಾಜ ಮಹಾರಾಜರು ಮತ್ತು ಅವರ ಆಡಳಿತ, ಮಾಡಿದ ಯುದ್ಧ ಮತ್ತು ಒಂದಿಷ್ಟು ಅವರ ಸಾಧನೆ ಹೇಳಿ, ಮಕ್ಕಳನ್ನು ಪರೀಕ್ಷೆಯಲ್ಲಿ ಪಾಸ್ ಮಾಡಿಸಿ 'ಧನ್ಯೋಸ್ಮಿ' ಎನಿಸಿಕೊಳ್ಳುತ್ತಿದೇಯೆ ಹೊರತು ಅದರಿಂದ ಇಂದಿನ ಪೀಳಿಗೆ ಮತ್ತು ದೇಶಕ್ಕೇ ಏನು ಲಾಭವಿದೆ? ನನಗಂತೂ ಗೊತ್ತಾಗುತ್ತಿಲ್ಲ.
ಇತಿಹಾಸದ ಪರಿಚಯ ನಮಗೆ ಇರಬೇಕು, ಆದರೆ ಅದು ರಾಜ ಮಹಾರಾಜರ ಚರಿತ್ರೆಯಾಗಿ ಅಲ್ಲ. ಈ ಬಗ್ಗೇ ಇನ್ನೋಮ್ಮೆ ಚರ್ಚೆ ಮಾಡೋಣ.
ಸ್ವಾತಂತ್ರ್ಯೋತ್ತರದ ಮಹಾನ್ ಸೇನಾನಿಗಳಾದ ಜನರಲ್ ಕಾರ್ಯಪ್ಪ, ಮಾಣಿಕ್ ಷಾ... ಹೀಗೆ ಸಾವಿರಾರು ಸೈನಿಕರು ನಮ್ಮ ಪಾಠ ಪುಸ್ತಕಗಳಲ್ಲಿ ಹೆಚ್ಚೆಂದರೆ ಗೆರೆಯೊಂದರಲ್ಲಿ ಸೆರೆಯಾಗಿ ಮರೆಯಾಗಿ ಹೋಗುವ ಪರಿ ನಿಜಕ್ಕೂ ರೇಜಿಗೆ ಹುಟ್ಟಿಸುತ್ತದೆ.
ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಕಾರಣರಾದವರನ್ನು ನೆನಪಿಸಿಕೊಳ್ಳುವುದು ಮುಖ್ಯವೇ, ಆದರೆ ಆ ಸ್ವಾತಂತ್ರ್ಯ ಉಳಿಸಿಕೊಟ್ಟವರನ್ನು ಕೂಡ ನೆನಪಿಸಿಕೊಳ್ಳವುದು ಮುಖ್ಯವಲ್ಲವೇ?
ಈ ವರ್ಷ ಜುಲೈ 26ರಂದು 'ವಿಜಯ ದಿನ' ಅಥವಾ 'ಅಪರೇಷನ್ ವಿಜಯ'ದ ದಶಮಾನೋತ್ಸವವನ್ನು ರಾಜಕೀಯದ ಸೋಂಕಿಲ್ಲದೆ, ಆರ್ಥಪೂರ್ಣವಾಗಿ ಆಚರಿಸುವ ಶಕ್ತಿ, ಬುದ್ದಿ, ಮಾನಸಿಕ ಆರೋಗ್ಯ ನಮ್ಮ ಸರಕಾರಕ್ಕೆ ಬರಲಿ, ಸಿಗಲಿ ಎಂದು ಸದ್ಯ ಪ್ರಾರ್ಥಿಸುತ್ತಿದ್ದೇನೆ.
ಅಮೇಲೆ ಉಳಿದದ್ದು!
ಜ್ಯೆ ಜವಾನ್, ಜ್ಯೆ ಕಿಸಾನ್, ಜ್ಯೆ ವಿಜ್ಞಾನ್!
Tuesday, June 30, 2009
ಕುದುರೆ ನಿಂತರೆ, ಇನ್ನೇನು ಓಡುತ್ತೆ?
ಬೆಂಗಳೂರಿನ್ನು ರೇಸ್ ಕುದುರೆಗಳ ಕೆನೆಯುವಿಕೆ ಮತ್ತು ಖರಪುಟದಿಂದ ಮುಕ್ತವಾಗುವುದು ನಿಶ್ಚಿತ. ನಗರದ ಕೇಂದ್ರ ಭಾಗದಲ್ಲಿದ್ದ ರೇಸ್ ಕೋರ್ಸ್ ನ್ನು ಸ್ಥಳಾಂತರಿಸಲು ಸರಕಾರ ಗಟ್ಟಿ ನಿರ್ಧಾರ ಕೈಗೊಂಡಿದೆ. ಇದರೊಂದಿಗೆ ಸುಮಾರು 90 ವರ್ಷಗಳ ಒಂದು ಪರಂಪರೆ ಬೆಂಗಳೂರಿನಿಂದ ಕಳಚಿಕೊಳ್ಳಲಿದೆ. ಇದು ಸರಕಾರದ ಪಾಲಿಗೆ ಅನಿವಾರ್ಯ, ಅತ್ಯಗತ್ಯ ಎರಡೂ ಹೌದು.ಇಲ್ಲೊಂದು ಉದ್ಯಾನ ಬರಲಿದೆ, ಬಸ್ ನಿಲ್ದಾಣ ಆಗಲಿದೆ, ವೀಕ್ಷಣಾ ಗೋಪುರ ನಿರ್ಮಾಣವಾಗಲಿದೆ, ಮೃಗಾಲಯವೂ ಆಗಬಹುದು ಎಂಬಿತ್ಯಾದಿ ಗಾಳಿ ಮಾತುಗಳು ಕೇಳಿ ಬರುತ್ತಿವೆ. ಒಟ್ಟಾರೆ ಇದೊಂದು ರೇಸ್ ಕೋರ್ಸ್ ಆಗಿದ್ದ ಸಂದರ್ಭದಲ್ಲಿ ಆದುದಕ್ಕಿಂತ ಹೆಚ್ಚಿನ ಚರ್ಚೆಗಳು ಇದೀಗ ಆರಂಭವಾಗಿದೆ.
ಹೌದು, ಚರ್ಚೆಗೆ ಇದು ಸಕಾಲ. ಈ ಹಿಂದೆ ಕೇಂದ್ರ ಕಾರಾಗೃಹ ಬದಲಾದಗಲೂ ಇದೇ ಮಾದರಿ ಚರ್ಚೆಗಳು ಕೇಳಿ ಬಂದಿದ್ದವು. ಜನ ಇದೇ ರೀತಿ ಮಾತನಾಡಿಕೊಳ್ಳುತ್ತಿದ್ದರು. ಆದರೆ ಕೊನೆಗೆ ಆದದ್ದು ಇವುಗಳಲ್ಲಿ ಕೆಲವು ಮಾತ್ರ. ಅದೇ ಮಾದರಿ ಚರ್ಚೆ ಈಗ ಆರಂಭವಾಗಿದೆ.
ಬಹುಶಃ ಕುದುರೆ ರೇಸ್ ಗಾಗ ನಗರದ ಹೃದಯಭಾಗದಲ್ಲಿ ನೂರಾರು ಕೋಟಿ ರೂ. ಬೆಲೆಬಾಳುವ 85 ಎಕರೆ ಜಾಗ ಬಳಕೆಯಾಗುತ್ತಿರುವುದು ಜಗತ್ತಿನ ಯಾವುದೇ ಭಾಗದಲ್ಲೂ ಕಂಡುಬರಲಿಕ್ಕಿಲ್ಲ.
ರೇಸ್ ಕೋರ್ಸ್ ಅದು ಈಗೀರುವ ಜಾಗದಿಂದ ಸ್ಥಳಾಂತರ ಮಾಡಿದ ತಕ್ಷಣ ಸರಕಾರದ ಕೆಲಸ ಮುಗಿಯಿತು ಎಂದಲ್ಲ. ಸರಕಾರದ ನಿಜಬಣ್ಣ/ ಯೊಗ್ಯತೆ ಗೊತ್ತಾಗುವುದು ಸರಕಾರ ಮುಂದೆ ಆ ಜಾಗವನ್ನು ಯಾವ ರೀತಿ ಬಳಸಿಕೊಳ್ಳುತ್ತದೆ ಎಂಬುದರ ಮೇಲೆ.
ಆದರೆ ನಮ್ಮ ಸರಕಾರದ ಬಳಿ ಈ ಅಮೂಲ್ಯ ಪ್ರದೇಶವನ್ನು ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಯೋಚನೆಯಾಗಲಿ, ಯೋಜನೆಯಾಗಲಿ ಇಲ್ಲ.
ಬೆಂಗಳೂರು ಕಾಂಕ್ರಿಟ್ ಕಾಡಾಗಿದೆ. ತುಂಡು ಭೂಮಿಯನ್ನು ಬಿಡದಂತೆ ರಿಯಲ್ ಎಸ್ಟೇಟ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮಾಲ್ ಗಳು ಮತ್ತಿತ್ತರ ವಾಣಿಜ್ಯ ಬಳಕೆಯ ಕಟ್ಟಡಗಳು ಎಲ್ಲ ಮಿತಿಯನ್ನು ಮೀರಿ ನಿರ್ಮಾಣಗೊಳ್ಳುತ್ತಿವೆ. ಅದರೊಂದಿಗೆ ಕೆಳ ರಸ್ತೆ, ಮೇಲು ರಸ್ತೆ. ಮೆಟ್ರೋ ರೈಲಿಗಾಗಿ ಸಾಕಷ್ಟು ಮರಗಳ ಮಾರಣ ಹೋಮ ನಡೆದಿದೆ. ಇದರಿಂದ ಬೆಂಗಳೂರಿಗಿರುವ 'ಹಸಿರು ನಗರಿ' ಎಂಬ ಪಟ್ಟಕ್ಕೂ ಧಕ್ಕೆ ಬಂದಿದೆ. ಅದ್ದರಿಂದ ಈ ಸ್ಥಳದಲ್ಲಿ ಉದ್ಯಾನವನ ನಿರ್ಮಿಸುವುದೇ ಸೂಕ್ತ ಎಂದು ಬಹುಪಾಲು ಜನರ ಅಭಿಪ್ರಾಯ.
'ಇಂದು ಬೆಂಗಳೂರಿನ ಟ್ರೇಡ್ ಮಾರ್ಕ್ ನಂತಿರುವುದು ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಉದ್ಯಾನ ವನಗಳು. ಇವುಗಳೊಂದಿಗೆ ಅನೇಕ ಚಿಕ್ಕ ಪುಟ್ಟ ಉದ್ಯಾನವನಗಳಿವೆ. ಇಲ್ಲಿ ಉದ್ಯಾನ ನಿರ್ಮಿಸಿದ್ದೆ ಆದರೆ ಇದನ್ನು ಲಾಲ್ ಭಾಗ್. ಕಬ್ಬನ್ ಪಾರ್ಕ್ ಗಳ ಮಟ್ಟಕ್ಕೆ ಅಥವಾ ಅವುಗಳನ್ನು ಮೀರಿಸುವಂತೆ ಮಾಡಬಹುದು' ಎನ್ನುತ್ತಾರೆ ವಿದ್ಯಾನಗರದ ಶ್ರೀಧರ್ ದೀಕ್ಷಿತ್.
ಉದ್ಯಾನವನ ಎಂದೊಡನೇ 50 ಮರ, 25 ಕಲ್ಲು ಬೆಂಚುಹಾಕಿ ಪ್ರೇಮಿಗಳಿಗೆ, ಜಾಗಿಂಗ್, ವಾಕಿಂಗ್ ಮಾಡುವವರಿಗೆ ಸೀಮಿತ ಮಾಡುವುದರ ಬದಲು ನಾನಾ ಔಷಧೀಯ ಗುಣವಿರುವ ಗಿಡಮರಗಳನ್ನು ಜೊತೆಜೊತೆಗೆ ಅಪರೂಪದ ವಿನಾಶದಂಚಿನಲ್ಲಿರುವ ಮತ್ತು ಇನ್ನಿತರ ಕಾರಣಗಳಿಗಾಗಿ ಉಪಯುಕ್ತವಾಗಿರುವ ಗಿಡಮರಗಳನ್ನು ಬೆಳೆಸಿದ್ದೆ ಆದಲ್ಲಿ ಇದು ಜಗತ್ತಿನ ಮಹತ್ವದ ಉದ್ಯಾನವೆಂದು ಕರೆಸಿಕೊಳ್ಳುವುದರಲ್ಲಿ ಅನುಮಾನವಿಲ್ಲ. ಇದು ಪರಿಸರ ಉಳಿಸುವಿಕೆಗಿನ ಸರಕಾರದ ಬದ್ದತೆಯನ್ನು ಕೂಡ ಎತ್ತಿಹಿಡಿಯುತ್ತದೆ. ಹೊಗೆ. ಧೂಳು ಮುಂತಾದ ಕಲ್ಮಶಗಳನ್ನೆ ಸೇವಿಸಿ ಸೇವಿಸಿ ಜಡ್ಡುಗೊಂಡಿರುವ ಬೆಂಗಳೂರಿಗರ ಮೂಗಿಗೆ, ಕಣ್ಣಿಗೆ ಸ್ವಲ್ಪ ಮಟ್ಟಿನ ಆಹ್ಲಾದತೆಯನ್ನು ನೀಡಬಲ್ಲದು ಎನ್ನುತ್ತಾರೆ ಅವರು.
ಇಲ್ಲೊಂದು ಮೃಗಾಲಯ ನಿರ್ಮಿಸುವುದರ ಬಗ್ಗೆಯೂ ಸರಕಾರ ಗಂಭೀರವಾಗಿ ಚಿಂತಿಸಬಹುದು. ಬೆಂಗಳೂರಿನಲ್ಲಿ ಎಲ್ಲವೂ ಇದೆ. ಆದರೆ ಮೃಗಾಲಯವೊಂದಿಲ್ಲ. ಈ ಸ್ಥಳ ಬಿಟ್ಟರೆ ಮೃಗಾಲಯ ನಿರ್ಮಿಸಲು ಬೇರೆ ಪ್ರಶಸ್ತ ಜಾಗ ಇಷ್ಟು ಸುಲಭವಾಗಿ ದೊರಕುವುದು ಅನುಮಾನ. ಮೃಗಾಲಯ ನಿರ್ಮಿಸಿದ್ದೆ ಆದರೆ ಇದು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂಬುದು ವಿಜಯನಗರದ ವೆಂಕಟೇಶ್ ಗೌಡರ ಅಭಿಪ್ರಾಯ.
ಆದರೆ ಗೋವಿಂದರಾಜನಗರದ ಶ್ರೀನಿವಾಸ್ ಪ್ರಕಾರ, ಇಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸರಕಾರ ಯೋಚಿಸುವುದು ಉತ್ತಮ. ನಗರದ ದರ್ಶನ ಮಾಡಿಸಲು ಇಲ್ಲೊಂದು ವೀಕ್ಷಣ ಗೋಪುರ ರಚಿಸಬಹುದು. ಇದರಿಂದ ಬೆಂಗಳೂರಿಗರಿಗೆಯೇ ಅಪರಿಚಿತವಾಗುತ್ತಿರುವ ನಗರವನ್ನು ಪರಿಚಯ ಮಾಡಿಕೊಳ್ಳಬಹುದು.
ಈ ಮೂರು ಸಾಧ್ಯತೆಗಳನ್ನು ಒಟ್ಟಿಗೆ ಸಾಕರಗೊಳಿಸಲು ಸಾಧ್ಯವಿದೆ ಕೂಡ.
ನಗರದ ದಟ್ಟಣೆಯ ನಡುವೆ ನಿಲುಗಡೆಗೆ ಎಲ್ಲೂ ತಾಣವೇ ಇಲ್ಲದಂತಾಗಿದೆ. ಅದ್ದರಿಂದ ಈ ಸ್ಥಳವನ್ನು ವಾಹನ ನಿಲುಗಡೆ ತಾಣವನ್ನಾಗಿ ಬಳಸಿಕೊಳ್ಳಬಹುದು. ಹಾಗಂತ ಇದನ್ನು ಸಂಪೂರ್ಣ ನಿಲುಗಡೆಗೂ ಬಳಸಿಕೊಳ್ಳಲು ಆಗದು. ಕಾರಣ ಇಷ್ಟು ವಿಶಾಲ ಸ್ಥಳದಲ್ಲಿ ನಿಲ್ಲಿಸಬಹುದಾದಷ್ಟು ವಾಹನ ಇತ್ತ ಬರುವುದೂ ಇಲ್ಲ. ಒಂದಿಷ್ಟು ಜಾಗ ಇದಕ್ಕಾಗಿ ಬಳಸಿಕೊಳ್ಳಬಹುದು ಎಂಬ ಸಲಹೆ ನೀಡುತ್ತಾರೆ ವಸಂತನಗರದದ ಶೇಖ್ ಅಬ್ದುಲ್ ರಶೀದ್.
ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಸ್ ಗಳು ತುಂಬಿಕೊಂಡು ಕೆಲವೊಮ್ಮೇ ಇಡೀ ಸಂಚಾರಿ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲ ಆಗಿ ಬಿಡುತ್ತದೆ. ಅದ್ದರಿಂದ ಅಲ್ಲಿಂದ ಒಂದಿಷ್ಟು ಬಸ್ ಗಳನ್ನು ಇಲ್ಲಿಗೆ ವರ್ಗಾಯಿಸಿ ಇಲ್ಲಿಂದಲೆ ಸಾಗುವಂತೆ ಮಾಡಬಹುದು ಎಂಬುದು ಶೇಷಾದ್ರಿಪುರದ ನಾಗರಾಜ್ ಅಭಿಪ್ರಾಯ.
ಒಟ್ಟಿನಲ್ಲಿ ಬೆಂಗಳೂರಿನ ಮುಂದಿನ ಬೆಳವಣಿಗೆಯಲ್ಲಿ ಅತ್ಯಂತ ಉಪಯುಕ್ತ ಪಾತ್ರ ವಹಿಸಲಿರುವ ಈ ಜಾಗ ಮತ್ತೊಂದು ಸಮಸ್ಯೆಯಾಗುವ ಬದಲು ಇರುವ ಸಮಸ್ಯೆಗೆ ಪರಿಹಾರವಾಗಲಿ ಎಂಬುದೇ ಬಹುಪಾಲು ಜನರ ಆಶಯ. ಸರಕಾರ ಕೂಡ ಈ ನಿಟ್ಟಿನಲ್ಲಿ ಯೋಚಿಸಲಿ.
Subscribe to:
Posts (Atom)